ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದ ಸಿಎಂ, ಡಿಕೆಶಿ

|
Google Oneindia Kannada News

ಬೆಂಗಳೂರು, ಜುಲೈ 14 : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಚಿವ ಡಿ. ಕೆ. ಶಿವಕುಮಾರ್ ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದರು. ವೈದ್ಯರ ಜೊತೆ ಆರೋಗ್ಯದ ಬಗ್ಗೆ ಮಾತುಕತೆ ನಡೆಸಿದರು.

ಭಾನುವಾರ ಮಧ್ಯಾಹ್ನ ಎಚ್. ಡಿ. ಕುಮಾರಸ್ವಾಮಿ ಮತ್ತು ಡಿ. ಕೆ. ಶಿವಕುಮಾರ್ ಕುಮಾರಕೃಪಾ ಅತಿಥಿ ಗೃಹದಿಂದ ಒಂದೇ ಕಾರಿನಲ್ಲಿ ಹೆಬ್ಬಾಳಕ್ಕೆ ತೆರಳಿದರು. ಆಸ್ಟರ್ ಆಸ್ಪತ್ರೆಗೆ ಭೇಟಿ ನೀಡಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಆರೋಗ್ಯ ವಿಚಾರಿಸಿದರು.

ಕುತೂಹಲ ಮೂಡಿಸಿದ ಬಿಜೆಪಿ ನಾಯಕರ ದೆಹಲಿ ಭೇಟಿ!ಕುತೂಹಲ ಮೂಡಿಸಿದ ಬಿಜೆಪಿ ನಾಯಕರ ದೆಹಲಿ ಭೇಟಿ!

HD Kumaraswamy DK Shivakumar visits Aster hospital

ನಾಗೇಂದ್ರ ಅವರು ಎದೆ ನೋವಿನ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗೇಂದ್ರ ಆರೋಗ್ಯ ವಿಚಾರಿಸಿದ ಬಳಿಕ ವೈದ್ಯರ ಜೊತೆ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ವಿಶ್ವಾಸಮತಯಾಚನೆ ದಿನ ವಿಧಾನಸೌಧಕ್ಕೆ ಬರುವಂತೆ ಆಹ್ವಾನಿಸಿದರು.

ಅಡ್ಡಗೋಡೆ ಮೇಲೆ ದೀಪವಿಟ್ಟ ಸಿದ್ದರಾಮಯ್ಯ ಆಪ್ತ ಎಂ.ಟಿ.ಬಿ.ನಾಗರಾಜ್ಅಡ್ಡಗೋಡೆ ಮೇಲೆ ದೀಪವಿಟ್ಟ ಸಿದ್ದರಾಮಯ್ಯ ಆಪ್ತ ಎಂ.ಟಿ.ಬಿ.ನಾಗರಾಜ್

ಆಸ್ಪತ್ರೆಯಲ್ಲಿ ಶಾಸಕ ನಾಗೇಂದ್ರ ಸಂಬಂಧಿಕರ ಜೊತೆ ಚರ್ಚೆ ನಡೆಸಿದ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳು ವಿಶ್ವಾಸಮತಯಾಚನೆ ದಿನ ಶಾಸಕರನ್ನು ವಿಧಾನಸೌಧಕ್ಕೆ ಕರೆದುಕೊಂಡು ಬರುವ ಕುರಿತು ಚರ್ಚೆ ನಡೆಸಿದರು.

ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ

ಕೆ.ಕೆ.ಗೆಸ್ಟ್‌ ಹೌಸ್‌ಗೆ ಆಗಮಿಸುವುದಕ್ಕೂ ಮೊದಲು ಎಚ್. ಡಿ. ಕುಮಾರಸ್ವಾಮಿ ದೇವೇಗೌಡರನ್ನು ಭೇಟಿಯಾಗಿದ್ದರು. 3 ಗಂಟೆಗಳ ಕಾಲ ಪದ್ಮನಾಭನಗರದ ನಿವಾಸದಲ್ಲಿ ಮಹತ್ವದ ಚರ್ಚೆ ನಡೆಸಿದ ಬಳಿಕ ಗೆಸ್ಟ್‌ ಹೌಸ್‌ಗೆ ಆಗಮಿಸಿದರು.

ಆಸ್ಟರ್ ಆಸ್ಪತ್ರೆಯಿಂದ ಕೆ.ಕೆ.ಗೆಸ್ಟ್‌ ಹೌಸ್‌ಗೆ ಆಗಮಿಸಿದ ಎಚ್. ಡಿ. ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಡಾ.ಜಿ.ಪರಮೇಶ್ವರ ಅವರ ಜೊತೆ ಸಭೆ ನಡೆಸಿದರು.

English summary
Karnataka Chief Minister H.D.Kumaraswamy and Minster D.K.Shivakuar visited the Aster hospital Hebbal and inquired the health condition of Ballary rural Congress MLA B.Nagendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X