ದಲಿತ ಮಹಿಳೆಗೆ ಆರ್ಥಿಕ ಸಹಾಯ ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಜೂನ್ 01 : ಜನತಾ ದರ್ಶನದ ವೇಳೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಸವಿತಾಗೆ ಎಚ್.ಡಿ.ಕುಮಾರಸ್ವಾಮಿ ಅವರು ಆರ್ಥಿಕ ನೆರವು ನೀಡಿದ್ದಾರೆ. ಸವಿತಾ ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸವಿತಾ ಅವರು ಬೇಕರಿ ನಡೆಸಲು ಅನುಕೂಲವಾಗುವಂತೆ 2 ಲಕ್ಷ ರೂ. ಸಹಾಯ ಮಾಡಿರುವ ಕುಮಾರಸ್ವಾಮಿ ಅವರು, ನೊಂದ ಮಹಿಳೆಗೆ ಹಕ್ಕುಪತ್ರ ಕೊಡಿಸಲು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಗೋಪಾಲಯ್ಯ ಮತ್ತು ಬಿಬಿಎಂಪಿ ಉಪ ಮೇಯರ್ ಹೇಮಲತಾ ಅವರಿಗೆ ಸೂಚನೆ ಕೊಟ್ಟಿದ್ದಾರೆ. [ಮಹಿಳೆಗೆ ಕಿರುಕುಳ, ಸರ್ಕಾರಕ್ಕೆ ಗಡುವು ಕೊಟ್ಟ ಎಚ್ಡಿಕೆ]

'ನೊಂದ ಮಹಿಳೆಗೆ ಸಹಾಯ ಮಾಡಲು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದೆ. ಆದರೆ, ಅದು ಈಡೇರಿಲ್ಲ. ಚುನಾವಣೆ ಇರುವುದರಿಂದ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದನ್ನು ಮುಂದೂಡಿದ್ದೇನೆ. ಮಹಿಳೆಗೆ ನ್ಯಾಯ ಸಿಗದಿದ್ದರೆ ಧರಣಿ ನಡೆಸುವುದು ಖಂಡಿತ' ಎಂದು ಕುಮಾರಸ್ವಾಮಿ ಹೇಳಿದ್ದಾರೆ. [ಪೊಲೀಸರ ಕಿವಿ ಹಿಂಡಿದ ಸಿದ್ದರಾಮಯ್ಯ]
ಯಾರು ಈ ಸವಿತಾ? : ಬೆಂಗಳೂರಿನ ಹೊಸಹಳ್ಳಿ ನಿವಾಸಿ ಸವಿತಾ ಅವರು ಮೇ 17ರಂದು ಜನತಾ ದರ್ಶನದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಆದರೆ, ಸಿದ್ದರಾಮಯ್ಯ ಗೃಹ ಕಚೇರಿ ಬಳಿ ಇದ್ದ ಪೊಲೀಸರು ರಾತ್ರಿ 8 ಗಂಟೆಯ ತನಕ ಆಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. [ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ ನೀಡಿದ ಸೂಚನೆಗಳೇನು?]
ಸವಿತಾ ಅವರನ್ನು ಸಿಎಂ ಮನೆ ಬಳಿಯಿಂದ ಹೈಗೌಂಡ್ಸ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಮಾನವೀಯವಾಗಿ ವರ್ತಿಸಲಾಗಿದೆ. ವೇಶ್ಯಾವಾಟಿಕೆ ಕೇಸು ದಾಖಲು ಮಾಡುವುದಾಗಿ ಬೆದರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬುದು ಆರೋಪವಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications