ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಲಿತ ಮಹಿಳೆಗೆ ಆರ್ಥಿಕ ಸಹಾಯ ಮಾಡಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 01 : ಜನತಾ ದರ್ಶನದ ವೇಳೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಸವಿತಾಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಆರ್ಥಿಕ ನೆರವು ನೀಡಿದ್ದಾರೆ. ಸವಿತಾ ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸವಿತಾ ಅವರು ಬೇಕರಿ ನಡೆಸಲು ಅನುಕೂಲವಾಗುವಂತೆ 2 ಲಕ್ಷ ರೂ. ಸಹಾಯ ಮಾಡಿರುವ ಕುಮಾರಸ್ವಾಮಿ ಅವರು, ನೊಂದ ಮಹಿಳೆಗೆ ಹಕ್ಕುಪತ್ರ ಕೊಡಿಸಲು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಗೋಪಾಲಯ್ಯ ಮತ್ತು ಬಿಬಿಎಂಪಿ ಉಪ ಮೇಯರ್ ಹೇಮಲತಾ ಅವರಿಗೆ ಸೂಚನೆ ಕೊಟ್ಟಿದ್ದಾರೆ. [ಮಹಿಳೆಗೆ ಕಿರುಕುಳ, ಸರ್ಕಾರಕ್ಕೆ ಗಡುವು ಕೊಟ್ಟ ಎಚ್ಡಿಕೆ]

hd kumaraswamy

'ನೊಂದ ಮಹಿಳೆಗೆ ಸಹಾಯ ಮಾಡಲು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದೆ. ಆದರೆ, ಅದು ಈಡೇರಿಲ್ಲ. ಚುನಾವಣೆ ಇರುವುದರಿಂದ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದನ್ನು ಮುಂದೂಡಿದ್ದೇನೆ. ಮಹಿಳೆಗೆ ನ್ಯಾಯ ಸಿಗದಿದ್ದರೆ ಧರಣಿ ನಡೆಸುವುದು ಖಂಡಿತ' ಎಂದು ಕುಮಾರಸ್ವಾಮಿ ಹೇಳಿದ್ದಾರೆ. [ಪೊಲೀಸರ ಕಿವಿ ಹಿಂಡಿದ ಸಿದ್ದರಾಮಯ್ಯ]

ಯಾರು ಈ ಸವಿತಾ? : ಬೆಂಗಳೂರಿನ ಹೊಸಹಳ್ಳಿ ನಿವಾಸಿ ಸವಿತಾ ಅವರು ಮೇ 17ರಂದು ಜನತಾ ದರ್ಶನದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಆದರೆ, ಸಿದ್ದರಾಮಯ್ಯ ಗೃಹ ಕಚೇರಿ ಬಳಿ ಇದ್ದ ಪೊಲೀಸರು ರಾತ್ರಿ 8 ಗಂಟೆಯ ತನಕ ಆಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. [ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ ನೀಡಿದ ಸೂಚನೆಗಳೇನು?]

ಸವಿತಾ ಅವರನ್ನು ಸಿಎಂ ಮನೆ ಬಳಿಯಿಂದ ಹೈಗೌಂಡ್ಸ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಮಾನವೀಯವಾಗಿ ವರ್ತಿಸಲಾಗಿದೆ. ವೇಶ್ಯಾವಾಟಿಕೆ ಕೇಸು ದಾಖಲು ಮಾಡುವುದಾಗಿ ಬೆದರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬುದು ಆರೋಪವಾಗಿದೆ.

English summary
Janata Dal (S) state president H.D. Kumaraswamy extened financial help to dalit woman Savitha. Savitha who was allegedly ill-treated by the police in Bengaluru during Chief Minister Siddaramaiah Janata Darshan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X