JDS President: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ: ಬಿಗ್ ಅಪ್ಡೇಟ್ ಕೊಟ್ಟ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 23: ರಾಜ್ಯ ಜೆಡಿಎಸ್ ಪಕ್ಷದಲ್ಲಿ ಬಹುದಿನಗಳಿಂದ ಜೆಡಿಎಸ್ ಪಕ್ಷಕ್ಕೆ ನೂತನ ಸಾರಥಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು ದೇವೇಗೌಡರ ಕುಟುಂಬ ಸಜ್ಜಾಗಿದ್ದು, ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ಎಂಬ ಬಗ್ಗೆ ನಾವು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು. ಇನ್ನೂ ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಕೋರ್ ಕಮಿಟಿ ಪುನಾ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನಾ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಕೇಂದ್ರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ಸಿಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ದೇಶದಲ್ಲಿ 50 ವರ್ಷಗಳ ಕಾಂಗ್ರೆಸ್ ಪಕ್ಷ ಒಂದೇ ಆಡಳಿತ ನಡೆಸಿದೆ. ಸ್ವಾತಂತ್ರ್ಯ ಬಂದ ನಂತರ ಎಲ್ಲಾ28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರನ್ನೇ ಜನ ಗೆಲ್ಲಿಸುತ್ತಿದ್ದರು. ಆಗ ಕೇಂದ್ರದಲ್ಲೂ, ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಅವತ್ತಿನ ಅ ಸಂಸತ್ ಸದಸ್ಯರು ಏನೇನು ತಂದಿದ್ದರು? ಎಂದು ಸಚಿವರು ವಾಗ್ದಾಳಿ ನಡೆಸಿದರು.
ಆಗ ದೆಹಲಿಯಿಂದ ಅವರದ್ದೇ ಪಕ್ಷದ ಸರ್ಕಾರದಿಂದ ಏನು ತಂದರು? ಅಂದು ಕರ್ನಾಟಕಕ್ಕೆ ಎಷ್ಟು ಹಣ ತಂದರು? ಯಾವ ನೀರಾವರಿ ಸಮಸ್ಯೆ ಬಗೆಹರಿಸಿದರು. ಯಾವ ಅಭಿವೃದ್ಧಿಗೆ ಹಣ ತಂದ್ರು? ನಮ್ಮ ಬಗ್ಗೆ ಚರ್ಚೆ ಮಾಡೋ ಬದಲು ಅವರೇ ಕುಳಿತು ಚರ್ಚೆ ಮಾಡಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯಗೆ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.
ಚರಣ್ ಸಿಂಗ್ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಲು ಬಿಡಲಿಲ್ಲ. ಚಂದ್ರಶೇಖರ್ ಸೇರಿ ಎಷ್ಟು ಜನರನ್ನ ಬಲಿ ತೆಗೆದುಕೊಂಡರು. ಅವರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿಬಿಟ್ಟರು. ಹಾಗೆಯೇ ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದೇ ಇದೇ ಕಾಂಗ್ರೆಸ್. ಇವರಿಂದ ನಾನು ಕಲಿಬೇಕಾ? ಎಂದು ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications