ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರಿಗಳಿಗೆ ಕಂಡಲ್ಲಿ ಗುಂಡು : ಎಚ್.ಡಿ.ಕುಮಾರಸ್ವಾಮಿ

|
Google Oneindia Kannada News

ಬೀದರ್, ಜನವರಿ 17 : 'ನಾನು ಮುಖ್ಯಮಂತ್ರಿಯಾಗಿದ್ದರೆ ಅತ್ಯಾಚಾರ ಮಾಡುವವರನ್ನು ಶೂಟ್ಎಟ್‌ ಸೈಟ್ ಮಾಡಲು ನಿರ್ದೇಶನ ನೀಡುತ್ತಿದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬುಧವಾರ ಬೀದರ್‌ನ ಕರ್ನಾಟಕ ಕಲಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕುಮಾರಸ್ವಾಮಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗೆ ವಿದ್ಯಾರ್ಥಿಗಳಿಂದ ಕುಮಾರಸ್ವಾಮಿ ಸಲಹೆಗಳನ್ನು ಸ್ವೀಕರಿಸಿದರು.

ಅಭಿಮಾನಿಗಳ ಪಾಲಿನ ಅಣ್ಣ ಎಚ್ ಡಿ ಕುಮಾರಸ್ವಾಮಿ ವ್ಯಕ್ತಿಚಿತ್ರಅಭಿಮಾನಿಗಳ ಪಾಲಿನ ಅಣ್ಣ ಎಚ್ ಡಿ ಕುಮಾರಸ್ವಾಮಿ ವ್ಯಕ್ತಿಚಿತ್ರ

ದೇಶ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ, 'ನಮ್ಮ ನಾಡಗೀತೆಯಲ್ಲಿ ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಲಾಗಿತ್ತು. ಆದರೆ, ಇಂದು ಸರ್ಕಾರ ನಡೆಸುವವರು ಕೆಲವು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು' ಎಂದರು.

ಹಿರಿಯ ನಾಗರಿಕರಿಗೆ ಕುಮಾರಸ್ವಾಮಿಯಿಂದ ಉಚಿತ ಸೇವೆಗಳ ಭರವಸೆಹಿರಿಯ ನಾಗರಿಕರಿಗೆ ಕುಮಾರಸ್ವಾಮಿಯಿಂದ ಉಚಿತ ಸೇವೆಗಳ ಭರವಸೆ

HD Kumaraswamy interaction with students in Bidar, highlights

'ಕಾನೂನು ರಕ್ಷಣೆ ಮಾಡುವಲ್ಲಿ ಆಡಳಿತ ನಡೆಸುವವರು ವಿಫಲರಾಗಿದ್ದಾರೆ. ಸಂಕ್ರಾತಿ ದಿನ ಹಿರಿಯ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ, ಅವರ ಪತ್ನಿ ಸರವನ್ನು ಕಳವು ಮಾಡಿದ ಪ್ರಕರಣ ನಡೆದಿದೆ. ಇನ್ನು ಜನರಿಗೆ ರಕ್ಷಣೆ ಎಲ್ಲಿದೆ?' ಎಂದರು.

'ಕೆಲವು ಸಮಾಜಘಾತುಕ ಶಕ್ತಿಗಳಿಗೆ ನಾವು ತಪ್ಪು ಮಾಡಿದರೆ, ಅತ್ಯಾಚಾರ ಮಾಡಿದರೆ ಈ ದೇಶದ ವ್ಯವಸ್ಥೆಯಲ್ಲಿ ಸುಲಭವಾಗಿ ಪಾರಾಗಬಹುದು ಎಂದು ಕೊಂಡಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅತ್ಯಾಚಾರ ಶೂಟ್ಎಟ್‌ ಸೈಟ್ ಮಾಡಲು ನಿರ್ದೇಶನ ನೀಡುವಂತಹ ಕಠಿಣ ಕ್ರಮ ಕೈಗೊಳ್ಳುತ್ತೇನೆ' ಎಂದು ಹೇಳಿದರು.

'ಇಂತಹ ಕ್ರಮ ಕೈಗೊಂಡಾಗ ಭಯ ಉಂಟಾಗುವ ಸಾಧ್ಯತೆ ಇದೆ. ನಾಡಿನ ಪ್ರತಿ ಮಹಿಳೆಯು ನಿರ್ಭಯವಾಗಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣ ಮಾಡಬೇಕಿದೆ. ಅದಕ್ಕೆ ಕೆಲವು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ' ಎಂದರು.

English summary
Safety of the women is our priority said Former Chief Minister and JDS state president H.D.Kumaraswamy. Kumaraswamy interacted with students on January 17, 2018 at Bidar, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X