ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು, ಜುಲೈ 05: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದರು.

ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಡಿ ಕೆ ಶಿವಕುಮಾರ್‌, ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

HD Kumaraswamy Is A Madman It Is Better To Get Treatment

ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಿ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾತನಾಡಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದು ಹೇಳಿದರು.

ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಯಾರ ಹೆಸರನ್ನೂ ಹೇಳದೇ ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಬಿಜೆಪಿ ಸ್ನೇಹಿತರು ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೊಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಅವರು ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

62 ಕೋಟಿ ಪರಿಹಾರವನ್ನು ಸರಕಾರ ಕೊಡಬೇಕು ಎನ್ನುತ್ತಿದ್ದಾರೆ ಸಿಎಂ. ಹೀಗೆ ಹೇಳುವ ಸಿದ್ದರಾಮಯ್ಯ ಅವರಿಗೆ ಜನರ ಕಷ್ಟ ಗೊತ್ತಿಲ್ಲವೇ? ರಾಜ್ಯದ ಬಡವರ ನೋವು ಗೊತ್ತಾಗುತ್ತಿಲ್ಲವೇ? ರಾತ್ರೋರಾತ್ರಿ ಭೂಸ್ವಾಧೀನ ಮಾಡಿಕೊಳ್ಳುತ್ತಾರೆ. ಅವರನ್ನು ಬೀದಿಗೆ ನಿಲ್ಲಿಸುತ್ತಾರೆ. ಪರಿಹಾರ ಮಾತ್ರ ಕೊಡುವುದಿಲ್ಲ. ನೀವು ಮಾತ್ರ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದೀರಿ. ಇದು ಯಾವ ನ್ಯಾಯ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+