ಸಬ್ ಅರ್ಬನ್ ರೈಲಿಗೆ ಒಪ್ಪಿಗೆ ಸೇರಿದಂತೆ ಸಂಪುಟ ಸಭೆ ನಿರ್ಣಯಗಳು
ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವು ಹತ್ತು ಹಲವು ಸಾರಿಗೆ ಸಂಪರ್ಕ ಸೌಲಭ್ಯಗಳನ್ನು ಕುರಿತಂತೆ ಚರ್ಚಿಸಿ, ಅನೇಕ ಯೋಜನೆಗಳಿಗೆ ಅಸ್ತು ಎಂದಿದೆ.
ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಮೆಟ್ರೋ ನಿಲ್ದಾಣ, ಕೆಐಎಎಲ್ ಹಾಗೂ ಮೆಟ್ರೋ ಸಂಪರ್ಕ, ಸಬ್ ಅರ್ಬನ್ ರೈಲ್ವೆ ಯೋಜನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಚಿವ ಸಂಪುಟ ಸಭೆ ಮುಕ್ತಾಯವಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕಾಶೆಂಪೂರ ಅವರು ನೀಡಿದ ವಿವರಗಳ ಮುಖ್ಯಾಂಶಗಳು ಹೀಗಿವೆ:
* ಕೆಪಿಎಸ್ಸಿ ಹಂಗಾಮಿ ಅಧ್ಯಕ್ಷರಾಗಿ ಷಡಕ್ಷರಿ ಸ್ವಾಮಿಯನ್ನು ನೇಮಿಸಲು ಸಂಪುಟ ಸಭೆಯಲ್ಲಿ ನಿರ್ಧಾರ.
* ನಗರದ 4 ಮಾರ್ಗಗಳಲ್ಲಿ ಸಬ್ ಅರ್ಬನ್ ರೈಲ್ವೆ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ.
- ಈ ಯೋಜನೆಯ ಒಟ್ಟು ವೆಚ್ಚ 29,908 ಕೋಟಿ, ಇದರಲ್ಲಿ ಶೇ. 20ರಷ್ಟು ರಾಜ್ಯ, ಶೇ. 20 ರಷ್ಟು ಕೇಂದ್ರ ಸರ್ಕಾರ ಹಾಗೂ ಶೇ. 60ರಷ್ಟು ವೆಚ್ಚವನ್ನು ಸಾಲದ ಮೂಲಕ ಭರಿಸಲಾಗುತ್ತದೆ.

ಮೊದಲ ಮಾರ್ಗ
1) ಕೆಂಗೇರಿ-ಮೆಜೆಸ್ಟಿಕ್- ಕಂಟೋನ್ಮೆಂಟ್- ಕೆಆರ್ ಪುರಂ- ಬೈಯಪ್ಪನಹಳ್ಳಿ ಮಾರ್ಗ
- 2) ಮೆಜೆಸ್ಟಿಕ್- ಯಶವಂತಪುರ- ಯಲಹಂಕ- ರಾಜಾನುಕುಂಟೆ ಮಾರ್ಗ
- 3) ನೆಲಮಂಗಲ-ಚಿಕ್ಕಬಾಣಾವಾರ -ಬೈಯಪ್ಪನಹಳ್ಳಿ ಮಾರ್ಗ ಮತ್ತು *
- 4) ಬೈಯಪ್ಪನಹಳ್ಳಿ- ದೇವನಹಳ್ಳಿ- ಯಲಹಂಕ ಮಾರ್ಗದಲ್ಲಿ ಸಬರ್ಬನ್ ರೈಲ್ವೆ ಯೋಜನೆ ನಿರ್ಮಿಸಲು ಚಿಂತನೆ.

ವಿಜಯಪುರ ಜಿಲ್ಲೆ, ಕಲಬುರಗಿ ನಗರಾಭಿವೃದ್ಧಿ
* ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿಗೆ ನೀಡಲಾಗಿದ್ದ 600 ಎಕರೆ ಜಮೀನನ್ನು ವಾಪಸ್ ಅರಣ್ಯ ಇಲಾಖೆಗೆ ಪಡೆಯಲು ಒಪ್ಪಿಗೆ.
* ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಇತರೆ 23 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 73.62 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ.
* ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಪಟ್ಟಿಯ ಸಂಖ್ಯೆ 16ರಲ್ಲಿ ಕಾಡು ಕುರುಬ ಜಾತಿಗೆ ಸಮಾನಾಂತರವಾಗಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ.
* ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಿಸಿರುವ 88 ಎಕರೆಯಲ್ಲಿ 95 ಕೋಟಿ ಅಂದಾಜು ವೆಚ್ಚದಲ್ಲಿ ವಸತಿ ಯೋಜನೆ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಆಲಮಟ್ಟಿ ಅಣೆಕಟ್ಟು
* ಆಲಮಟ್ಟಿ ಅಣೆಕಟ್ಟು ಪ್ಯಾಕೇಜ್ 1ರ ಹೆಚ್ಚುವರಿ ಆರ್ಥಿಕ ಹೊಣೆಯ 766 ಲಕ್ಷ ಮೊತ್ತಕ್ಕೆ ಅನುಮೋದನೆ
* 2018-19ನೇ ಸಾಲಿನ ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ಔಷಧಿ ಕಿಟ್ 9.63 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ
* 2018-19ನೇ ಸಾಲಿನ ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪೂರ್ವ ಶಿಕ್ಷಣ ಕಿಟ್ 19.77 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ
* 500 ರೈತ ಉತ್ಪಾದಕ ಕೇಂದ್ರಗಳ ಸ್ಥಾಪನೆಗೆ 300 ಕೋಟಿ ರೂ. ಬಿಡುಗಡೆಗೆ ಅಸ್ತು

ಬೇಲೂರು-ಹಾಸನ-ಸಕಲೇಶಪುರ
* ಬೇಲೂರು-ಹಾಸನ-ಸಕಲೇಶಪುರ ರೈಲ್ವೆ ಯೋಜನೆ ಪರಿವರ್ತನೆ ಮಾಡಿ, ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೆ ಮಾರ್ಗ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಮ್ಮತಿ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ. 50:50 ವೆಚ್ಚ ಹಂಚಿಕೆಗೆ ಸಚಿವ ಸಂಪುಟ ಅನುಮೋದನೆ
* ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಂಚಿಕೆಗೆ 77.67 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ.
* ಚಲ್ಲಘಟ್ಟದಲ್ಲಿ 140 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ
* ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರವರೆಗಿನ ಫೇಸ್-2 ಮೆಟ್ರೋ ಯೋಜನೆಯ ಪರಿಷ್ಕೃತ ವೆಚ್ಚ 5,994 ಕೋಟಿ ರೂ.ಗೆ ಸಂಪುಟ ಅನುಮೋದನೆ.
* ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಈ ಮುಂಚಿನ 29.1 ಕಿ.ಮೀ. ಉದ್ದದ ನಾಗವಾರ-ಏರ್ಪೋರ್ಟ್ ಮೆಟ್ರೋ ಮಾರ್ಗವನ್ನು ಬದಲಾವಣೆ.
* ನಾಗವಾರ-ಹೆಬ್ಬಾಳ-ಜಕ್ಕೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 38 ಕಿ.ಮೀ. ಉದ್ದದ ಪರಿಷ್ಕೃತ ಮೆಟ್ರೋ ಯೋಜನೆಗೆ ಅನುಮೋದನೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications