ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ವಿರುದ್ಧ ಧರಣಿ : ಯಡಿಯೂರಪ್ಪಗೆ ಸಿಎಂ ಪತ್ರ

|
Google Oneindia Kannada News

Recommended Video

ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ | Oneindia Kannada

ಬೆಂಗಳೂರು, ಜೂನ್ 16 : ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ತಮ್ಮೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜೂನ್ 16ರ ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರು ಈ ಪತ್ರವನ್ನು ಬರೆದಿದ್ದಾರೆ. ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ನಾಯಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪತ್ರವನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.

ಜಿಂದಾಲ್ ವಿವಾದ : ಚರ್ಚೆಗೆ ಸಿದ್ಧ ಎಂದ ಕುಮಾರಸ್ವಾಮಿಜಿಂದಾಲ್ ವಿವಾದ : ಚರ್ಚೆಗೆ ಸಿದ್ಧ ಎಂದ ಕುಮಾರಸ್ವಾಮಿ

HD Kumaraswamy letter to BS Yeddyurappa

ಜಿಂದಾಲ್ ವಿವಾದ, ಬರ ಪರಿಹಾರ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ಶುಕ್ರವಾರದಿಂದ ಮೌರ್ಯ ಸರ್ಕಲ್‌ ಬಳಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳುಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳು

ಪತ್ರದಲ್ಲಿ ಏನಿದೆ?

ರಾಜ್ಯದಲ್ಲಿ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್‌ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರತಿಭಟಿಸಿ ತಮ್ಮ ನಾಯಕತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಸರ್ಕಾರಿ ಜಮೀನು ಕ್ರಯ ವಿವಾದ: ಜಿಂದಾಲ್‌ ಸ್ಪಷ್ಟನೆಸರ್ಕಾರಿ ಜಮೀನು ಕ್ರಯ ವಿವಾದ: ಜಿಂದಾಲ್‌ ಸ್ಪಷ್ಟನೆ

ರಾಜ್ಯ ಸರ್ಕಾರವು ಬರ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ರಾಜ್ಯದ ಜನರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಂಡಿರುತ್ತದೆ. ರೈತರ ಸಾಲ ಮನ್ನಾ ಯೋಜನೆಯನ್ನು ಸಹ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ಪುನರ್-ವಿಮರ್ಶಗೆ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುತ್ತದೆ. ದಿನಾಂಕ 16/6/2019 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿರುವದನ್ನು ಗಮನಿಸಿದ್ದೇನೆ.

ತಮ್ಮೊಂದಿಗೆ ಚರ್ಚಿಸಲು ನಾನು ಸದಾ ಸಿದ್ಧನಾಗಿದ್ದೇನೆ. ತಮ್ಮ ಸಮಯಕ್ಕೆ ಅನುಗುಣವಾಗಿ ಚರ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ....

English summary
Karnataka Chief Minister H.D.Kumaraswamy letter to opposition leader B.S.Yeddyurappa who protesting against Karnataka government decision to handover 3,667 acres land to the JSW Steel in Ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X