ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಎಚ್.ಡಿ. ಕುಮಾರಸ್ವಾಮಿ ಚರ್ಚೆ | HD Kumaraswamy
ಕೇಂದ್ರ ಬಜೆಟ್-2026 ಮಂಡನೆ ಆಗಿ 3 ದಿನ ಕಳೆದಿದ್ದು, ಈಗಲೂ ಬಜೆಟ್ ಬಗ್ಗೆ ಬಿಸಿಬಿಸಿ ಚರ್ಚೆ ಕಡಿಮೆ ಆಗಿಲ್ಲ. ಅದರಲ್ಲೂ 50 ಲಕ್ಷ ಕೋಟಿ ರೂಪಾಯಿ ದಾಟಿರುವ ಭಾರತದ ಬಜೆಟ್ ಕುರಿತು ಇಡೀ ಜಗತ್ತು ಈಗ ಮಾತನಾಡುತ್ತಿದೆ. ಆಧುನಿಕ ಜಗತ್ತಿಗೆ ಹೊಂದಿಕೊಳ್ಳುವ ರೀತಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ ಎಂಬ ಚರ್ಚೆ ನಡೆಯುತ್ತಿದೆ. ಈಗಾಗಲೇ ಬಜೆಟ್ ಮೇಲೆ ಸಂಸತ್ನಲ್ಲಿ ಚರ್ಚೆ ಕೂಡ ಶುರುವಾಗಿದೆ. ಇದೇ ಸಮಯದಲ್ಲೇ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಅಂದಹಾಗೆ ಉಕ್ಕು ಸಚಿವಾಲಯದಲ್ಲಿ ಹಲವು ಹೊಸ ಯೋಜನೆಗಳು ಸಿದ್ಧವಾಗಿವೆ. ಮತ್ತೊಂದು ಕಡೆ ಹೊಸ ಆರ್ಥಿಕ ವರ್ಷದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೂಡ ಕೈಗೊಳ್ಳಲಾಗುತ್ತಿದೆ. ಹೀಗಿದ್ದಾಗ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಚರ್ಚೆ ನಡೆಸಿದರು. ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು ಕೂಡ ಈ ಮಹತ್ವದ ಚರ್ಚೆಯ ಸಮಯದಲ್ಲಿ ಹಾಜರಿದ್ದರು.

ಉಕ್ಕು ವಲಯದ ಅಭಿವೃದ್ಧಿಗೆ ಯೋಜನೆಗಳು
ಕೇಂದ್ರ ಹಣಕಾಸು ಸಚಿವರ ಕಚೇರಿಯಲ್ಲಿ, ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಮುಖ ಅಭಿವೃದ್ಧಿ ಆದ್ಯತೆಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದಾರೆ. ಉಕ್ಕು ಸಚಿವಾಲಯದ ಹೊಸ ಹೂಡಿಕೆ ಸೇರಿದಂತೆ, ಈಗಾಗಲೇ ಪ್ರಗತಿಯಲ್ಲಿ ಇರುವ ಯೋಜನೆಗಳ ಬಗ್ಗೆ ಹಾಗೂ ಉಕ್ಕು ವಲಯ ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆದಿದೆ. ಈ ಕುರಿತು ಕೇಂದ್ರದ ಬೃಹತ್ ಕೈಗಾರಿಕೆ & ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.
ಅಲ್ಲದೇ ದೇಶದ ಸುಸ್ಥಿರ ಬೆಳವಣಿಗೆ ಉತ್ತೇಜಿಸುವ ಹಾಗೂ ವಿಕಸಿತ ಭಾರತ-2047 ದೃಷ್ಟಿಕೋನದಲ್ಲಿ ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರ ಬಜೆಟ್ ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ ಎಂದು ಸಚಿವ ಎಚ್ಡಿಕೆ ಅವರು ತಿಳಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳ ಚುನಾವಣೆ ಜೊತೆಗೆ ಕೇಂದ್ರಾಡಳಿತ ಪ್ರದೇಶ ಪುದುಚೆರಿ ಎಲೆಕ್ಷನ್ ಕೂಡ ನಡೆಯಲಿದೆ. ಈ ಸಮಯದಲ್ಲಿ ಮಂಡನೆ ಆಗಿರುವ ಕೇಂದ್ರ ಬಜೆಟ್ ಸಾಕಷ್ಟು ಗಮನ ಕೂಡ ಸೆಳೆದಿತ್ತು.
ಯಾವ ಕ್ಷೇತ್ರಕ್ಕೆ ಹೆಚ್ಚು ಒತ್ತು?
ಜಾಗತಿಕ ಮಟ್ಟದಲ್ಲಿ ಯುದ್ಧ ಹಾಗೂ ತಿಕ್ಕಾಟ ನಡೆಯುತ್ತಿರುವ ಸಮಯದಲ್ಲಿ ಭಾರತದ ಬಜೆಟ್ ಎಲ್ಲವನ್ನೂ ಸಮತೋಲನದಲ್ಲಿ ತೂಗಿಸಿಕೊಂಡು ಹೋಗಿದೆ. ಅದರಲ್ಲೂ ಸಾರಿಗೆ ಕ್ಷೇತ್ರಕ್ಕೆ ಈ ಬಾರಿ ಬಜೆಟ್ನಲ್ಲಿ ಅತಿಹೆಚ್ಚು ಎಂದರೆ ಸುಮಾರು 6 ಲಕ್ಷ ಕೋಟಿ ರೂಪಾಯಿ ಅನುದಾನ ಹಂಚಿಕೆಯನ್ನ ಮಾಡಲಾಗಿದೆ. ಹಾಗೇ 5 ಲಕ್ಷ 94 ಸಾವಿರ ಕೋಟಿ ರೂಪಾಯಿ ಪಡೆದ ರಕ್ಷಣಾ ಕ್ಷೇತ್ರವು ಪಟ್ಟಿಯ 2ನೇ ಸ್ಥಾನದಲ್ಲಿ ಇದೆ.
ಇನ್ನುಳಿದಂತೆ ಗ್ರಾಮೀಣ ಅಭಿವೃದ್ಧಿಗಾಗಿ 2,73,108 ಕೋಟಿ ರೂಪಾಯಿ & ಗೃಹ ಸಚಿವಾಲಯಕ್ಕೆ 2,55,234 ಕೋಟಿ ರೂಪಾಯಿ ಬಜೆಟ್ ಅನುದಾನ ಹಂಚಿಕೆ ಮಾಡಲಾಗಿದೆ. ಇದೇ ಸಮಯದಲ್ಲೇ ಸೆಮಿಕಂಡಕ್ಟರ್ ವಲಯಕ್ಕೆ ಇನ್ನಷ್ಟು ಬಲ ತುಂಬಲು ಬರೋಬ್ಬರಿ 40,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿರುವುದು ಭವಿಷ್ಯದ ದೃಷ್ಟಿಯಿಂದ ದೊಡ್ಡ ಸಾಧನೆ ಆಗಲಿದೆ. ಈ ವಲಯ ಜಗತ್ತಿನಲ್ಲಿ ಸಾಕಷ್ಟು ಸಂಪತ್ತು ವೃದ್ಧಿಸುವ ಸಾಮರ್ಥ್ಯ ಹೊಂದಿದೆ ಎಂಬುದು ತುಂಬಾ ಮುಖ್ಯವಾದ ವಿಚಾರ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications