ಜೆಡಿಎಸ್ ನಿಂದ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆ ಪತ್ರ ವೈರಲ್!
ಬೆಂಗಳೂರು, ಅಕ್ಟೋಬರ್ 18: 2024 ರ ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿರುವುದು ಜೆಡಿಎಸ್ ನ ಮುಸ್ಲಿಂ ಸಮುದಾಯದವರ ಅಸಮಾಧಾನಕ್ಕೆ ಕಾರಣವಾಗಿದೆ. ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ನಾಯಕರ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಇನ್ನೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನಲೆ ಕುಮಾರಸ್ವಾಮಿ ಅವರನ್ನ ಪಕ್ಷದಿಂದ ಉಚ್ಚಾಟಿಸಿಸಬೇಕು ಎಂದು ಚಿಂತನ ಸಭೆಯಲ್ಲಿ ಮುಸ್ಲಿಂ ಮುಖಂಡರೊಬ್ಬರು ಅಸಮಾಧಾನವನ್ನ ವ್ಯಕ್ತಪಡಿಸಿದ್ರು. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕರಾದ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಉಚ್ಚಾಟನೆ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಪತ್ರದಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ನಾಯಕರಾದ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಇಬ್ರಾಹಿಂ, ಸುದ್ದಿಗೋಷ್ಟಿ ನಡೆಸುವ ಮೂಲಕ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮದು ಒರಿಜಿನಲ್ ಜೆಡಿಎಸ್ ಪಕ್ಷ. ತಮ್ಮ ಅನುಮತಿ ಇಲ್ಲದೆ ಯಾವುದೇ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಮೈತ್ರಿ ವಿಚಾರವಾಗಿ ನಮ್ಮ ಬಳಿ ಯಾವುದೇ ರೀತಿಯ ಚರ್ಚೆಯನ್ನ ನಡೆಸಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಪತ್ರದಲ್ಲಿ ಏನಿದೆ?
ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು, ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ತಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ ಎಂದು ನಕಲಿ ಪತ್ರದಲ್ಲಿ ತಿಳಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications