ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್‌ಘಾಟ್‌ಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮಹಾತ್ಮಾ ಗಾಂಧಿಗೆ ನಮನ

By Gururaj
|
Google Oneindia Kannada News

Recommended Video

ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿ ಮೋದಿಯನ್ನ ಭೇಟಿ ಮಾಡಲಿದ್ದಾರೆ ಎಚ್ ಡಿ ಕೆ

ಬೆಂಗಳೂರು, ಮೇ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ರಾಜ್‌ಘಾಟ್‌ಗೆ ಭೇಟಿ ನೀಡಿದ ಅವರು, ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು.

ಸೋಮವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಬೇಡಿಕೆ ಇಟ್ಟಿರುವ 5 ಖಾತೆಗಳು!ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಬೇಡಿಕೆ ಇಟ್ಟಿರುವ 5 ಖಾತೆಗಳು!

HD Kumaraswamy pays tribute to Mahatma Gandhi

ಸೋಮವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಜೊತೆ ಅವರು ಸಭೆ ನಡೆಸಿದ್ದರು. ಸಂಜೆ 5.30ಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.

ರಾಜ್ ಘಾಟ್ ನ ಮಹಾತ್ಮಾ ಸಮಾಧಿಗೆ ಗಣ್ಯರೆಲ್ಲರ ಪುಷ್ಪನಮನರಾಜ್ ಘಾಟ್ ನ ಮಹಾತ್ಮಾ ಸಮಾಧಿಗೆ ಗಣ್ಯರೆಲ್ಲರ ಪುಷ್ಪನಮನ

HD Kumaraswamy pays tribute to Mahatma Gandhi

ಸಂಪುಟ ವಿಸ್ತರಣೆ ಕಸರತ್ತು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಅಹ್ಮದ್ ಪಟೇಲ್ ಅವರ ಜೊತೆ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸುತ್ತಿದ್ದಾರೆ. ಖಾತೆಗಳ ಹಂಚಿಕೆ, ಸಂಪುಟಕ್ಕೆ ಸೇರುವ ಶಾಸಕರ ಬಗ್ಗೆ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ.

English summary
Karnataka Chief Minister H.D.Kumaraswamy on Monday paid tribute to Mahatma Gandhi the Father of the Nation. Kumaraswamy in New Delhi tour. He will meet PM Narendra Modi on 5.30 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X