ರಾಜ್ಘಾಟ್ಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮಹಾತ್ಮಾ ಗಾಂಧಿಗೆ ನಮನ
Recommended Video
ಬೆಂಗಳೂರು, ಮೇ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ರಾಜ್ಘಾಟ್ಗೆ ಭೇಟಿ ನೀಡಿದ ಅವರು, ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಸೋಮವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ರಾಜ್ಘಾಟ್ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಂಪುಟ ವಿಸ್ತರಣೆ : ಕಾಂಗ್ರೆಸ್ ಬೇಡಿಕೆ ಇಟ್ಟಿರುವ 5 ಖಾತೆಗಳು!
ಸೋಮವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಜೊತೆ ಅವರು ಸಭೆ ನಡೆಸಿದ್ದರು. ಸಂಜೆ 5.30ಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.
ರಾಜ್ ಘಾಟ್ ನ ಮಹಾತ್ಮಾ ಸಮಾಧಿಗೆ ಗಣ್ಯರೆಲ್ಲರ ಪುಷ್ಪನಮನ
ಸಂಪುಟ ವಿಸ್ತರಣೆ ಕಸರತ್ತು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ ಘಾಟ್ ಗೆ ತೆರಳಿ ಮಹಾತ್ಮಾಗಾಂಧಿ ಸ್ಮಾರಕಕ್ಕ ಪುಷ್ಪನಮನ ಸಲ್ಲಿಸಿದರು.#HDKumaraSwamy #CMOfKarnataka #GovernmentOfKarnataka #KarnatakaVarthe pic.twitter.com/sE6d2Oiutu
— Karnataka Varthe (@KarnatakaVarthe) May 28, 2018
ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಅಹ್ಮದ್ ಪಟೇಲ್ ಅವರ ಜೊತೆ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸುತ್ತಿದ್ದಾರೆ. ಖಾತೆಗಳ ಹಂಚಿಕೆ, ಸಂಪುಟಕ್ಕೆ ಸೇರುವ ಶಾಸಕರ ಬಗ್ಗೆ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ.