ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ: ಹೆಚ್ಡಿಕೆ ಕಿಡಿ
ಬೆಂಗಳೂರು, ಜನವರಿ 29: ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ.." ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ; ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದು ಪ್ರಶ್ನಿಸಿದ್ದಾರೆ.
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ @siddaramaiah ನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ.1/8#ಶಿಷ್ಟಾಚಾರಗೆಟ್ಟ_ಮುಖ್ಯಮಂತ್ರಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 29, 2024
*
"ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು…
ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು.. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ?
ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು.
ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ.ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು?

ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ?
ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ; ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications