'ದೇವೇಗೌಡರ ಫೋಟೋಗೆ ಚಪ್ಪಲಿ ಹಾರ ಹಾಕಿಸಿದ್ದಾಗ ಎಲ್ಲಿ ಹೋಗಿತ್ತು ಒಕ್ಕಲಿಗರ ಸ್ವಾಭಿಮಾನ?'

ಮೈಸೂರು, ಸೆಪ್ಟೆಂಬರ್‌ 21: ಮೈಸೂರಿನಲ್ಲಿ ದೇವೇಗೌಡರ ಫೋಟೋಗೆ ಚಪ್ಪಲಿ ಹಾರ ಹಾಕಿಸಿದ್ದಾಗ ಒಕ್ಕಲಿಗರ ಸ್ವಾಭಿಮಾನ ಎಲ್ಲಿ ಹೋಗಿತ್ತು ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಸಮಾಜದ ಸ್ವಾಮೀಜಿಗೆ ನಾನು ಸಾಫ್ಟ್ ಆಗಿರಲು ಹೇಳಿದ್ದೇನೆ ಎಂದು ಕೇಲವರು ಆರೋಪ ಮಾಡ್ತಿದ್ದಾರೆ, ನಾನ್ಯಾಕೆ ಅಂತಹದ್ದನ್ನು ಮಾಡಲಿ ಎಂದು ಡಿ ಕೆ ಬ್ರದರ್ಸ್‌ ಕುಟುಂಬದ ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ ಹರಿಹಾಯ್ದರು.

HD Kumaraswamy questioned that where did the self-respect of Okkaliga go when Deve Gowda was insulted

ನನ್ನ ವಿರುದ್ಧ ಡಿನೋಟಿ ಫಿಕೇಶನ್ ಆರೋಪ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮೂವರು ಸಚಿವರ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅದೊಂದು ಸ್ಕ್ರಿಪ್ಟೆಡ್ಡ್ ಮಾದ್ಯಮಗೋಷ್ಠಿ ಎಂದು ಲೇವಡಿ ಮಾಡಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೂ ಬರೆದುಕೊಟ್ಟ ಸ್ಕ್ರಿಪ್ಟ್ ಅನ್ನು ಮೂವರು ಸಚಿವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಿ ಅಂದು ಮುಖ್ಯಮಂತ್ರಿ ಆಗಿದ್ದ ನಾನೇನು ಬರೆದಿದ್ದೇನೆ, ನಾನೇನು ಆದೇಶ ಮಾಡಿದ್ದೇನೆ ಎಂಬುದು ಅವರಿಗೆ ಗೊತ್ತಿಲ್ಲವೇ? ಎಂದು ಕುಟುಕಿದರು. ಈ ಸಂದರ್ಭದಲ್ಲಿ ಸಚಿವರು, ತಮ್ಮ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮಾಡಲು ಸಚಿವರಿಗೆ ಬರೆದುಕೊಡಲಾಗಿದ್ದ ಟೂಲ್ ಕಿಟ್ ಪ್ರತಿಯನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು.

ನಾನು ಕೇಂದ್ರ ಸಚಿವನಾಗಿದ್ದು ಇವರಿಗೆ ತಡೆಯಲು ಆಗುತ್ತಿಲ್ಲ. ಹೇಗಾದರೂ ನನ್ನನ್ನು ಕಟ್ಟಿ ಹಾಕಲು ಇವರು ಹಣಿಸುತ್ತಲೇ ಇದ್ದಾರೆ. ನನ್ನ ವಿರುದ್ಧ ಒಂದು ವ್ಯವಸ್ಥಿತ ಟೂಲ್ ಕಿಟ್ ರೆಡಿ ಮಾಡಿದ್ದಾರೆ. ಅದನ್ನೇ ಸಇವರಿಗಳು ಬಾಯಿಪಾಠ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಇನ್ನೂ ನನ್ನ ಮೇಲೆ ಆರೋಪ ನಡೆಸಲು ಮಾಧ್ಯಮಗೋಷ್ಠಿ ನಡೆಸಿದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರಿಗೆ ಯಾರೋ ಸರಿಯಾಗಿ ಸ್ಕ್ರಿಪ್ಟ್ ಬರೆದು ಕೊಟ್ಟಿಲ್ಲ. ಅವರು ನನ್ನ ವಿರುದ್ಧ ಸುಳ್ಳಿನ ಕಥೆಯನ್ನೇ ಕಟ್ಟಿದ್ದಾರೆ. ನಾನು ಎಲ್ಲೂ ಕದ್ದು ಹೋಗುವ ಪ್ರಶ್ನೆಯೇ ಇಲ್ಲ. ಸುಳ್ಳು ಹೇಳಿಕೊಂಡು ಬೇರೆಯವರ ನೆರಳನ್ನು ತೆಗೆದುಕೊಳ್ಳುವ ಇವರಂತೆ ನಾನಲ್ಲ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಗುಡುಗಿದರು.

ನಾನು ಕೇಂದ್ರ ಮಾತ್ರಿಯಾಗಿದ್ದೇ ಇವರಿಗೆ ಸಂಕಟ ಶುರುವಾಗಿದೆ. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಸಾಲ ಸಾಲಾಗಿ ಟೀಕೆ ಮಾಡುತ್ತಿದ್ದಾರೆ. ಇಡೀ ಸರ್ಕಾರದ ಟಾರ್ಗೆಟ್ ನಾನೇ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಸಚಿವ ಕೃಷ್ಣ ಭೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ಮಿಸ್ಟರ್ ಕೃಷ್ಣ ಭೈರೇಗೌಡ.. ನನ್ನನ್ನು ಅಲುಗಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ನೀವು ಏನೆಲ್ಲ ಷಡ್ಯಂತ್ರ ಮಾಡಿದರೂ ನನ್ನ ಬಗ್ಗೆ ಏನೂ ಸಿಗುವುದಿಲ್ಲ. ಕಂದಾಯ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮದೆಲ್ಲಾ ಹೊರಗೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು

ನಾನು ಬುದ್ಧಿವಂತ ಎನ್ನುತ್ತೀರಿ. ವಿದೇಶದಲ್ಲಿ ಓದಿಕೊಂಡು ಬಂದಿದ್ದೇನೆ ಎನ್ನುತ್ತೀರಿ. ಮಧ ಕೃಷ್ಣಭೈರೇಗೌಡ ವಿದೇಶದಲ್ಲಿ ಓದಿ, ಮೇಧಾವಿ ಎಂದು ಹೇಳುತ್ತೀರಿ. ಆದರೆ, ನಾನು ಹರದನಹಳ್ಳಿ ಎಂಬ ಹಳ್ಳಿಯಲ್ಲಿ ಓದಿ ಬೆಳೆದವನು. ಕೃಷ್ಣ ಭೈರೇಗೌಡರೇ.. ಮಾಧ್ಯಮಗೋಷ್ಠಿಗೂ ಮೊದಲು ಈ ಪ್ರಕರಣದ ಬಗ್ಗೆ, ದಾಖಲೆಗಳ ಬಗ್ಗೆ ಸರಿಯಾದ ಮಾಹಿತಿ ಪದ್ದುಕೊಳ್ಳಬೇಕಿತ್ತು ಅಲ್ಲವೇ? ಎಂದು ಕಂದಾಯ ಮಂತ್ರಿಗೆ ಟಾಂಗ್ ಕೊಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಸೇರಿ ಅನೇಕ ಅಕ್ರಮಗಳಲ್ಲಿ ಸರ್ಕಾರ ತೊಡಗಿದೆ. ಪ್ರತಿಪಕ್ಷದಲ್ಲಿ ಇರುವ ನಾನು ಸಹಜವಾಗಿಯೇ ಪ್ರಶ್ನೆ ಮಾಡಿದ್ದೇನೆ. ಅದೇ ಅಪರಾಧ ಆಗಿದೆ ಇವರಿಗೆ. ನಾನು ಸಿದ್ದರಾಮಯ್ಯ ಅವರಂತೆ ಹಲ್ಕಾ ಕೆಲಸ ಮಾಡಿಲ್ಲ. ಮೂಡಾ ಹಗರಣದಲ್ಲಿ ಸರ್ಕಾರಿ ಜಮೀನನ್ನು ಹೇಗೆ ಕಬಳಿಸಿದ್ದಾರೆ ಎಂಬುದನ್ನು ದಾಖಲೆಗಳೇ ಜಗಜ್ಜಾಹೀರು ಮಾಡಿವೆ. ಆದರೆ, ಅದನ್ನು ಮುಚ್ಚಿಹಾಕಿಕೊಳ್ಳಲು ಆರೋಪ ಮಾಡಿದವರ ವಿರುದ್ಧವೇ ಪ್ರತ್ಯಾರೋಪ ಮಾಡಲಾಗುತ್ತಿದೆ. ಇದು ಇವರ ಮನಸ್ಥಿತಿ ಎಂದು ಅವರು ಟೀಕಿಸಿದರು.

ನನ್ನ ವಿರುದ್ಧದ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣಕ್ಕೂ ವ್ಯತ್ಯಾಸವಿದೆ. ಅವರಂತೆ ನಾನು ಹಲ್ಕಾ ಕೆಲಸ ಮಾಡಿಲ್ಲ. ನನ್ನ ಪ್ರಕರಣದ ಬಗ್ಗೆ ತನಿಖೆ ಆಗಿದೆ. 2015ರಲ್ಲಿಯೇ ಇದರ ಬಗ್ಗೆ ವಿಸ್ತೃತ ತನಿಖೆ ನಡೆದು ಬಿ ರಿಪೋರ್ಟ್ ಅನ್ನು ಕೂಡ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಈ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಈಗ ರಾಜಕೀಯ ಸೇಡಿಗಾಗಿ ತೆಗೆದಿದ್ದಾರೆ. ಆಗ ತನಿಖೆ ಮಾಡದೆ ಏನು ಸುಮ್ಮನೆ ಇದ್ದಿದ್ದು ಯಾಕೆ? ಈಗ ನನ್ನನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಕುತಂತ್ರ ಫಲಿಸದು ಎಂದು ಕುಮಾರಸ್ವಾಮಿ ಅವರು ಗುಡುಗಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+