ರಾಜ್ಯದಲ್ಲಿನ ಅಷ್ಟೊಂದು ಸಮಸ್ಯೆಗಳ ನಡುವೆ RSS ಬಗ್ಗೆ ಚರ್ಚೆ ಅಗತ್ಯವಿತ್ತೇ?: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 21: ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ದಿನವೂ ಆರ್ಎಸ್ಎಸ್.. ಆರ್ಎಸ್ಎಸ್.. ಎಂದು ಜಪ ಮಾಡುತ್ತಿದೆ. ಇದು ಆರ್ಎಸ್ಎಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನು ನಿವಾರಿಸುವುದು ಬಿಟ್ಟು ಒಂದು ಸಂಘಟನೆ ವಿರುದ್ಧ ಚರ್ಚಿಸುತ್ತಿದ್ದರೆ ಉಪಯೋಗ ಏನು? ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು. ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.
ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.
ಚನ್ನಪಟ್ಟಣದಲ್ಲಿ ಖವ್ವಾಲಿ ಕಾರ್ಯಕ್ರನದಲ್ಲಿ ಪೊಲೀಸರ ಮೇಲೆ ಹಣ ಎರಚಿದ ಘಟನೆ ನಡೆದಿದೆ. ಚನ್ನಪಟ್ಟಣದಲ್ಲಿ ಪೊಲೀಸರ ಮುಂದೆ ಡಾನ್ಸ್ ಮಾಡ್ತಾರೆ, ಪೊಲೀಸರ ಮೇಲೆ ಹಣ ಎರಚ್ತಾರೆ. ಹಣ ಎರಚಕೊಂಡವರ, ಎರಚಿದವರ ಮೇಲೆ ಕ್ರಮ ಇಲ್ಲ. ಆದರೆ ಆರ್ಎಸ್ಎಸ್ ಪಥ ಸಂಚಲನದಲ್ಲಿ ಗಣವೇಷಧಾರಿ ಆಗಿದ್ದ ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತಾರೆ. ಕಲಬುರಗಿಯಲ್ಲಿ ಕ್ರಮ ವಹಿಸಿದ ಮೇಲೆ ಚನ್ನಪಟ್ಟಣದಲ್ಲಿ ಕ್ರಮ ಯಾಕಿಲ್ಲ? ಎಂದು ಸರ್ಕಾರದ ಮೇಲೆ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ಹಾಸನಾಂಬೆ ದರ್ಶನ ವೇಳೆ ಜಿಲ್ಲಾಡಳಿತದಿನ ಶಿಷ್ಟಾಚಾರ ಪಾಲನೆ ಮಾಡದೆ ನಿಮಗೆ ಅಪಮಾನ ಮಾಡಲಾಗಿದೆ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ನಾನು ಶಿಸ್ತಾಚಾರಕ್ಕೆ ಆದ್ಯತೆ ಕೊಡಲ್ಲ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಧಿಕಾರಿಗಳಿಗೇಕೆ ತೊಂದರೆ ಕೊಡಬೇಕು? ದೇವಿಯ ದರ್ಶನ ಮುಖ್ಯ, ನನಗೆ ದರ್ಶನ ಆಗಿದೆ. ಸಾರ್ವಜನಿಕರು ಕೂಡ ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಮಾಡುತ್ತಿದ್ದಾರೆ. ಉತ್ತಮವಾಗಿ ವ್ಯವಸ್ಥೆ ಮಾಡಲಾಗಿದೆ. ಅದು ಮುಖ್ಯವೇ ಹೊರತು ಶಿಷ್ಟಾಚಾರವಲ್ಲ ಎಂದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications