ರಾಜ್ಯದಲ್ಲಿನ ಅಷ್ಟೊಂದು ಸಮಸ್ಯೆಗಳ ನಡುವೆ RSS ಬಗ್ಗೆ ಚರ್ಚೆ ಅಗತ್ಯವಿತ್ತೇ?: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 21: ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ದಿನವೂ ಆರ್ಎಸ್ಎಸ್.. ಆರ್ಎಸ್ಎಸ್.. ಎಂದು ಜಪ ಮಾಡುತ್ತಿದೆ. ಇದು ಆರ್ಎಸ್ಎಸ್ ಬಗ್ಗೆ ಚರ್ಚೆ ಮಾಡುವ ಸಂದರ್ಭವೇ? ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನು ನಿವಾರಿಸುವುದು ಬಿಟ್ಟು ಒಂದು ಸಂಘಟನೆ ವಿರುದ್ಧ ಚರ್ಚಿಸುತ್ತಿದ್ದರೆ ಉಪಯೋಗ ಏನು? ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು. ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.
ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.
ಚನ್ನಪಟ್ಟಣದಲ್ಲಿ ಖವ್ವಾಲಿ ಕಾರ್ಯಕ್ರನದಲ್ಲಿ ಪೊಲೀಸರ ಮೇಲೆ ಹಣ ಎರಚಿದ ಘಟನೆ ನಡೆದಿದೆ. ಚನ್ನಪಟ್ಟಣದಲ್ಲಿ ಪೊಲೀಸರ ಮುಂದೆ ಡಾನ್ಸ್ ಮಾಡ್ತಾರೆ, ಪೊಲೀಸರ ಮೇಲೆ ಹಣ ಎರಚ್ತಾರೆ. ಹಣ ಎರಚಕೊಂಡವರ, ಎರಚಿದವರ ಮೇಲೆ ಕ್ರಮ ಇಲ್ಲ. ಆದರೆ ಆರ್ಎಸ್ಎಸ್ ಪಥ ಸಂಚಲನದಲ್ಲಿ ಗಣವೇಷಧಾರಿ ಆಗಿದ್ದ ಪಿಡಿಓ ಮೇಲೆ ಕ್ರಮ ಕೈಗೊಳ್ಳುತ್ತಾರೆ. ಕಲಬುರಗಿಯಲ್ಲಿ ಕ್ರಮ ವಹಿಸಿದ ಮೇಲೆ ಚನ್ನಪಟ್ಟಣದಲ್ಲಿ ಕ್ರಮ ಯಾಕಿಲ್ಲ? ಎಂದು ಸರ್ಕಾರದ ಮೇಲೆ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ಹಾಸನಾಂಬೆ ದರ್ಶನ ವೇಳೆ ಜಿಲ್ಲಾಡಳಿತದಿನ ಶಿಷ್ಟಾಚಾರ ಪಾಲನೆ ಮಾಡದೆ ನಿಮಗೆ ಅಪಮಾನ ಮಾಡಲಾಗಿದೆ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ನಾನು ಶಿಸ್ತಾಚಾರಕ್ಕೆ ಆದ್ಯತೆ ಕೊಡಲ್ಲ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಧಿಕಾರಿಗಳಿಗೇಕೆ ತೊಂದರೆ ಕೊಡಬೇಕು? ದೇವಿಯ ದರ್ಶನ ಮುಖ್ಯ, ನನಗೆ ದರ್ಶನ ಆಗಿದೆ. ಸಾರ್ವಜನಿಕರು ಕೂಡ ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಮಾಡುತ್ತಿದ್ದಾರೆ. ಉತ್ತಮವಾಗಿ ವ್ಯವಸ್ಥೆ ಮಾಡಲಾಗಿದೆ. ಅದು ಮುಖ್ಯವೇ ಹೊರತು ಶಿಷ್ಟಾಚಾರವಲ್ಲ ಎಂದರು.
-
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications