ಪಾಕಿಸ್ತಾನ ಇಲ್ಲದಿದ್ದರೆ ನಿಮಗೆ ಒಂದೂ ಓಟು ಬೀಳುತ್ತಿರಲಿಲ್ಲ: ಬಿಜೆಪಿಗೆ ಎಚ್ಡಿಕೆ ಏಟು
Recommended Video
ಬೆಂಗಳೂರು, ಜನವರಿ 22: ಯುವ ಬ್ರಿಗೇಡ್ನ ಚಕ್ರವರ್ತಿ ಸೂಲಿಬೆಲೆಯನ್ನು ನಂಬರ್ ಒನ್ ದೇಶಭಕ್ತ ಎಂದು ಶ್ಲಾಘಿಸಿದ ಸಚಿವ ಸುರೇಶ್ ಕುಮಾರ್ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಟು ಟೀಕಾಪ್ರಹಾರ ನಡೆಸಿದ್ದಾರೆ.
ದಿನಬೆಳಗಾದರೆ ಪಾಕಿಸ್ತಾನವನ್ನು ಜಪಿಸುತ್ತೀರಿ. ನಿಮ್ಮ ಮೂಲ ಅಲ್ಲಿಯೇ ಇರಬಹುದು. ಪಾಕಿಸ್ತಾನ ಎಂಬ ದೇಶ ಭೂಪಟದಲ್ಲಿ ಇಲ್ಲದೇ ಹೋಗಿದ್ದರೆ ನೀವು ಇಲ್ಲಿ ಒಂದೇ ಒಂದು ಓಟು ಪಡೆಯಲು ಆಗುತ್ತಿರಲಿಲ್ಲ ಎಂದು ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.
ದೇಶಪ್ರೇಮ, ದೇಶಭಕ್ತಿಯ ವಿಚಾರದಲ್ಲಿ ಸುರೇಶ್ ಕುಮಾರ್, ಪ್ರಹ್ಲಾದ ಜೋಶಿ ವಿರುದ್ಧ ಸರಣಿ ಟ್ವೀಟ್ಗಳಲ್ಲಿ ವಾಗ್ದಾಳಿ ನಡೆಸಿರುವ ಅವರು, ಪಾಕಿಸ್ತಾನದ ಜಪ ಮಾಡುತ್ತಿದೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

ಅತ್ಯಾಚಾರಿಗಳಲ್ಲಿ ಧರ್ಮ ಹುಡುಕಿದವ
ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ!

ನಿಮ್ಮ ಮೇಲಿನ ಅಭಿಮಾನಕ್ಕೆ ಕುಂದಾಗಿದೆ
ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ... ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ 'ಆತ' ಕೊನೇ Rank.

ಮಾನಸಿಕ ಭ್ರಷ್ಟಾಚಾರಿ ಅನಾವರಣ
ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ.

ನಮ್ಮ ಮನೆಗೆ ಒಮ್ಮೆ ಬನ್ನಿ
'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ. ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ.

ಕೋಮು ಭಾವನೆಗಳೇ ಬಂಡವಾಳ
ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ.

ಬಿರಿಯಾನಿ ತಿಂದುಬಂದ ಪ್ರಧಾನಿ
ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವನು.

ಒಂದು ವೋಟೂ ಸಿಗುತ್ತಿರಲಿಲ್ಲ
ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು....?

ನಿಮ್ಮದೇ ಸಿದ್ಧಾಂತದ ಪ್ರತಿಪಾದಕರು
ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ?
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications