ಮಲೆನಾಡು, ಕರಾವಳಿಗೆ ಸೇತುವೆಗಳ ಕೊಡುಗೆ ಘೋಷಿಸಿದ ಕುಮಾರಸ್ವಾಮಿ
Recommended Video

ಬೆಂಗಳೂರು, ಅಕ್ಟೋಬರ್ 23: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಐದು ತಿಂಗಳು ಪೂರೈಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 150 ದಿನಗಳ ಸಾಧನೆಯನ್ನು ತೆರೆದಿಟ್ಟಿದ್ದಾರೆ.
ಸಾಲಮನ್ನಾ, ಋಣ ಪರಿಹಾರ ಕಾಯ್ದೆ, ಕೊಡಗು ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ವಲಯಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನಗಳು, ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಮಂಗಳವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿವರಿಸಿದರು.
ಈ ಬಾರಿ ಮುಖ್ಯವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಅತಿವೃಷ್ಟಿಯಿಂದ ರಸ್ತೆ ಮತ್ತು ಸೇತುವೆಗಳು ಹಾನಿಗೊಳಗಾಗಿವೆ. ಅಲ್ಲದೆ, ಅನೇಕ ಕಡೆ ಊರುಗಳ ನಡುವೆ ಸಂಪರ್ಕ ಕಲ್ಪಿಸಲು ನದಿಗಳು, ಹಳ್ಳಗಳಿಗೆ ಅಡ್ಡಲಾಗಿ ಸೇತುವೆಗಳಿಲ್ಲ. ಹೆಚ್ಚಿನ ಕಡೆ ಸಣ್ಣ ತೂಗುಸೇತುವೆಗಳನ್ನು ನಿರ್ಮಿಸಲಾಗಿದ್ದು, ಅವುಗಳೂ ಅಪಾಯಕಾರಿ ಸ್ಥಿತಿಯಲ್ಲಿವೆ.
ಹೀಗಾಗಿ ರಾಜ್ಯದೆಲ್ಲೆಡೆ ಸಂಪರ್ಕ ಸೌಲಭ್ಯವನ್ನು ಸುಧಾರಿಸುವ ಸಲುವಾಗಿ ಶಾಲಾ ಸಂಪರ್ಕ ಸೇತು ಎಂಬ ಹೊಸ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಶಾಲಾ ಸಂಪರ್ಕ ಸೇತು
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ತೋಡು, ಹಳ್ಳ-ಕೊಳ್ಳಗಳನ್ನು ದಾಟಲು ಬಳಸುವ ಅಪಾಯಕಾರಿ ಸ್ಥಿತಿಯಲ್ಲಿರುವ ಸಣ್ಣ ತೂಗುಸೇತುವೆ, ಕಾಲು ಸಂಕಗಳ ಬದಲಿಗೆ ಶಾಶ್ವತ ಸೇತುವೆಗಳನ್ನು ನಿರ್ಮಿಸಲು ಶಾಲಾ ಸಂಪರ್ಕ ಸೇತು ಯೋಜನೆಯನ್ನು ಹೊಸದಾಗಿ ರೂಪಿಸಲಾಗಿದೆ.

444 ತೂಗುಸೇತುವೆ
ಶಾಲಾ ಸಂಪರ್ಕ ಸೇತು ಯೋಜನೆಗಾಗಿ ಮೊದಲ ಹಂತದಲ್ಲಿ ಕರಾವಳಿ ಭಾಗದ 3 ಜಿಲ್ಲೆಗಳು ಹಾಗೂ ಮಲೆನಾಡು ಭಾಗದ 4 ಜಿಲ್ಲೆಗಳ ಒಟ್ಟು 444 ತೂಗುಸೇತುವೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ಶಾಶ್ವತ ಸಂಪರ್ಕ ಸೇತುವೆ ನಿರ್ಮಿಸಲಾಗುವುದು.
ಇದಕ್ಕಾಗಿ ಪ್ರಸಕ್ತ ವರ್ಷ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಚುರುಕು
ರಾಜ್ಯದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲು ಇರುವ ಅಡೆತಡೆಗಳನ್ನು ನಿವಾರಿಸಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಭೆಗಳನ್ನು ಕಾಲ ಕಾಲಕ್ಕೆ ನಡೆಸಲಾಗುತ್ತಿದೆ.
ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತಿತರ ಸಮಸ್ಯೆಗಳನ್ನು ಸಮನ್ವಯ ವಹಿಸಿ ಶೀಘ್ರವಾಗಿ ಪರಿಹರಿಸಿ ಕ್ರಮ ಕೈಗೊಳ್ಳಲು ಇದರಿಂದ ಅನುಕೂಲವಾಗಿದೆ.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 3 ರ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಹಂತ 4 ರ ಅಡಿ 3,500 ಕೋಟಿ ರೂ ವೆಚ್ಚದಲ್ಲಿ 2720 ಕಿ.ಮೀ. ಉದ್ದದ ರಸ್ತೆ ಸುಧಾರಣೆ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications