ಬಜೆಟ್ ಕುರಿತ ಆರೋಪಕ್ಕೆ ಸದನದಲ್ಲಿ ಉತ್ತರ ಕೊಟ್ಟ ಕುಮಾರಸ್ವಾಮಿ
Recommended Video

ಬೆಂಗಳೂರು, ಜುಲೈ 09 : ಕರ್ನಾಟಕ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕರ್ನಾಟಕ ಬಜೆಟ್ ಅಣ್ಣ-ತಮ್ಮಂದಿರ ಬಜೆಟ್, ಹಾಸನ-ರಾಮನಗರ-ಮಂಡ್ಯ ಬಜೆಟ್ ಮುಂತಾದ ಆರೋಪಗಳಿಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು.
ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ. ಅಣ್ಣ-ತಮ್ಮಂದಿರ ಬಜೆಟ್ ಎಂದೆಲ್ಲಾ ಟೀಕೆಗಳು ಬಂದಿದ್ದವು. ಎಲ್ಲದಕ್ಕೂ ಕುಮಾರಸ್ವಾಮಿ ಇಂದು ಉತ್ತರ ನೀಡಿದರು.

ಕುಮಾರಸ್ವಾಮಿ ಅವರ ತಿಳಿ ಹಾಸ್ಯ ಮಿಶ್ರಿತ ಮಾತುಗಳು ಸದಸನದಲ್ಲಿ ನಗುವಿನ ಅಲೆ ಎಬ್ಬಿಸಿತು. ಪ್ರತಿಪಕ್ಷ ಮಾಡಿದ ಆರೋಪಕ್ಕೆ ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು. ಕಾಂಗ್ರೆಸ್-ಜೆಡಿಎಸ್ನದ್ದು ಅಪವಿತ್ರ ಮೈತ್ರಿ ಎಂದು ಆರೋಪಿಸುವ ಯಡಿಯೂರಪ್ಪ ಅವರಿಗೆ ತಿರುಗೇಟು ಕೊಟ್ಟರು.
ಕುಮಾರಸ್ವಾಮಿ ಸದನದಲ್ಲಿ ಮಾತನಾಡಿದ ಭಾಷಣದ ಮುಖ್ಯಾಂಶಗಳು
* ನಾನು ಮೊದಲನೇ ಹಂತದಲ್ಲಿ ರೈತರ 34 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದೇನೆ. ಸಾಲಮನ್ನಾ ಬಗ್ಗೆ ಜನರಲ್ಲಿ ಅಪಾರ್ಥಗಳನ್ನು ಬಿತ್ತಬೇಡಿ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟರು.
* ಬಜೆಟ್ನಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಯಾವ ಸರ್ಕಾರದ ಕೈಯಲ್ಲಿಯೂ ಸಹ ಉಚಿತವಾಗಿ ವಿದ್ಯುತ್ ನೀಡಲು ಸಾಧ್ಯವಿಲ್ಲ.
* ಅಪ್ಪ-ಮಕ್ಕಳ ಬಜೆಟ್, ಅಣ್ಣ-ತಮ್ಮಂದಿರ ಬಜೆಟ್ ಎಂದು ಆರೋಪಗಳನ್ನು ಮಾಡುವುದು ಸರಿಯಲ್ಲ. ಯಾರಿಗೂ ಕೂಡಾ ಅಧಿಕಾರ ಶಾಶ್ವತವಲ್ಲ ಎಂಬುದನ್ನು ತಿಳಿಯಿರಿ.
* ನಾನು ಯಾವುದೇ ಜಾತಿಯೊಂದರ ಮುಖ್ಯಮಂತ್ರಿಯಲ್ಲ. ವಿಭೂತಿ ಬಳಿದುಕೊಂಡು ಬಂದವರನ್ನೂ ದೂರ ತಳ್ಳಿಲ್ಲ. ಅವರಿಗೂ ಕೆಲಸ ನೀಡಿದ್ದೇನೆ. ಒಕ್ಕಲಿಗರಿಗೆ ಶೇ 34ರಷ್ಟು ಅನುದಾನ ನೀಡಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು.
* ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದ ಅಪವಿತ್ರ ಮೈತ್ರಿ ಎಂದು ಆರೋಪಗಳನ್ನು ಮಾಡುತ್ತಿದ್ದೀರಿ. ಅಂದು ಬಿಜೆಪಿ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದಾಗ ಅದು ಅಪವಿತ್ರ ಮೈತ್ರಿ ಎಂದು ಅನ್ನಿಸಲಿಲ್ಲವೇ?
* ಸಾಂದರ್ಭಿಕ ಶಿಶು ಎಂಬ ಮಾತನ್ನು ಕುಮಾರಸ್ವಾಮಿ ಸದನದಲ್ಲಿ ಮತ್ತೊಮ್ಮೆ ಹೇಳಿದರು. ನಾನೊಂದು ಸಾಂದರ್ಭಿಕ ಶಿಶುವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಶಾಸಕರೇ ನನ್ನ ಅಪ್ಪ-ಅಮ್ಮ ಎಂದರು.
* ರಾಜಕಾರಣದಲ್ಲಿ ಟೀಕೆ, ಜಗಳ ಸಾಮಾನ್ಯ. ಹಿಂದೆ ಯಡಿಯೂರಪ್ಪ ಅವರ ಜೊತೆಗೂ ಜಗಳವಾಗಿತ್ತು. ಆದರೂ ಮೈತ್ರಿ ಸರ್ಕಾರ ರಚನೆ ಮಾಡಲಿಲ್ಲವೇ?. ಮೈತ್ರಿ ಸರ್ಕಾರ ಪತನವಾದಾಗ ಸಹ ಜಗಳ ನಡೆದಿತ್ತು.
* ಹಾಸನಕ್ಕೆ ಹೆಚ್ಚಿನ ಅನುದಾನ ನೀಡಿರುವ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ಹಾಸನದ ಶಾಸಕರು ಯಾವ ಪಕ್ಷದವರು ಎಂದು ಪ್ರಶ್ನಿಸಿದರು. ಹಾಸನದ ಬಿಜೆಪಿ ಶಾಸಕರು ಒಪ್ಪದಿದ್ದರೆ ಆ ಅನುದಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಲು ಸಿದ್ಧ ಎಂದರು.
* ನಾನು ಭಯಗ್ರಸ್ತ ಮುಖ್ಯಮಂತ್ರಿಯಲ್ಲ. ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಬೇಕು ಎಂಬ ಉದ್ದೇಶ ನಮ್ಮ ಸರ್ಕಾರಕ್ಕಿದೆ. 104 ಶಾಸಕರ ಬಲವಿದ್ದ ನಿಮಗೆ 113ಕ್ಕೆ ಏರಲು ಬಲವೆಲ್ಲಿತ್ತು? ಎಂದು ಪ್ರಶ್ನಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications