ರೈತರ ಬಗ್ಗೆ ಕುಮಾರಸ್ವಾಮಿ ಹೇಳಿಕೆ : ಯಾರು, ಏನು ಹೇಳಿದರು?
Recommended Video

ಬೆಂಗಳೂರು, ನವೆಂಬರ್ 19 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬಗ್ಗೆ ನೀಡಿದ್ದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ನಾಯಕರು ಸಹ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಮಧ್ಯಾಹ್ನ ರೈತರು ವಾಪಸ್ ಪಡೆದಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಸರ್ಕಾರಕ್ಕೆ 15 ದಿನಗಳ ಗುಡುವು ನೀಡಿದ್ದಾರೆ. ಸರ್ಕಾರ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ? ಎಂದು ಕಾದುನೋಡಬೇಕಿದೆ.
ಕಬ್ಬಿಗೆ ಬೆಂಬಲ ಬೆಲ ನೀಡುವಂತೆ ಬೆಳಗಾವಿಯಲ್ಲಿ ರೈತರು ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ ಅವರು,'ಮತ ಹಾಕುವಾಗ ಕುಮಾರಸ್ವಾಮಿ ನೆನಪಿಗೆ ಬಂದಿರಲಿಲ್ಲ. ಈಗ ಹಣ ಕೊಡಿ ಎಂದು ಪ್ರತಿಭಟನೆ ಮಾಡುವುದಕ್ಕೆ ಬಂದಿದ್ದೀಯಾ. ಹಾಗಾದರೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ?' ಎಂದು ರೈತ ಮಹಿಳೆಯನ್ನು ಪ್ರಶ್ನಿಸಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಸಹ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾರು, ಏನು ಹೇಳಿದರು ನೋಡಿ...

ಡಾ.ಜಿ.ಪರಮೇಶ್ವರ ಹೇಳಿಕೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು, 'ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಸರ್ಕಾರವು ರೈತರ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿದೆ. ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು' ಎಂದು ಹೇಳಿದರು.

ರೈತರಿಗೆ ನಾಟಿ ಮಾಡೋಕೆ ಬರಲ್ವಾ?
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಪ್ರತಿಕ್ರಿಯೆ ನೀಡಿದ್ದು, 'ಮುಖ್ಯಮಂತ್ರಿಗಳು ರೈತರ ಹೋರಾಟದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಮಂಡ್ಯದಲ್ಲಿ ನಾಟಿ ಮಾಡಿ ಬಂದು ಬೆಂಗಳೂರಿನಲ್ಲಿ ಇದ್ದಾರೆ. ಮಂಡ್ಯ ರೈತರಿಗೆ ನಾಟಿ ಮಾಡೋಕೇನು ಬರಲ್ವಾ?, ಎಚ್ಡಿಕೆ ಅವರದ್ದು ಬರೀ ಬೂಟಾಟಿಕೆ ಮಾತುಗಳು. ರೈತರ ಪರ ಹೋರಾಟ ಮಾಡಬೇಕಾದ್ರೆ ಜಮೀನು ಇಟ್ಟುಕೊಂಡೆ ಹೋರಾಟ ಮಾಡಬೇಕಾ? ಜಮೀನು ಇಲ್ಲದವರು ಹೋರಾಟ ಮಾಡಬಾರದ?. ಸಿಎಂ ಕೂಡಲೇ ರೈತ ಮಹಿಳೆಯ ಕ್ಷಮೆಯನ್ನು ಕೇಳಬೇಕು' ಎಂದು ಒತ್ತಾಯಿಸಿದರು.

ಎಚ್.ಡಿ.ರೇವಣ್ಣ ಹೇಳಿದ್ದೇನು?
'ರೈತರ ಬಗ್ಗೆ ಕಾಳಜಿ ಇದ್ದರೆ ಯಡಿಯೂರಪ್ಪ ಕೇಂದ್ರಕ್ಕೆ ಮನವಿ ಮಾಡಲಿ. ಯಡಿಯೂರಪ್ಪಗೆ ನಾಚಿಕೆ ಆಗಬೇಕು. 17 ಎಂಪಿಗಳನ್ನು ಇಟ್ಟುಕೊಂಡು ಬಿಜೆಪಿಯವರು ಏನು ಮಾಡುತ್ತಿದ್ದಾರೆ. ಪ್ರತಿಭಟನೆ ಹಿಂದೆ ಯಾರಿದ್ದಾರೆ ಎಂಬುದು ನಮಗೆ ತಿಳಿದಿದೆ. ಬಿಜೆಪಿಯವರಿಗೆ ನಾಚಿಕೆಯಾಗಬೇಕು' ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.

'ನಾನು ಕ್ಷಮೆ ಕೇಳುತ್ತೇನೆ'
ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿ ಮಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು, 'ಮಾನ್ಯ ಮುಖ್ಯಮಂತ್ರಿಗಳ ಪರವಾಗಿ ನಾನು ಕ್ಷಮೆ ಕೇಳಲು ಬಂದಿದ್ದೇನೆ. ನಮ್ಮ ಇಲಾಖೆಯಿಂದ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗಾಗಿ ನಮ್ಮ ಮುಖ್ಯಮಂತ್ರಿ ಸಮಯ ಕೊಟ್ಟಿದ್ದಾರೆ. ರೈತರಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ರೈತ ಮಹಿಳೆ ಬಗ್ಗೆ ಮಾತನಾಡುವಾಗ ತಾಯಿ ಎಂಬ ಪದ ಬಳಸಿದ್ದಾರೆ' ಎಂದರು.

ಕೈವಾಡ ಇದ್ದರೆ ಬಂಧಿಸಿ
'ರೈತರ ಪ್ರತಿಭಟನೆ ಹಿಂದೆ ಕೈವಾಡವಿದೆ ಎಂದು ನಿಮಗೆ ಅನ್ನಿಸಿದರೆ ಅವರನ್ನು ಬಂಧಿಸಿ, ಗುಪ್ತಚರ ಇಲಾಖೆ ನಿಮ್ಮ ಬಳಿಯೇ ಇದೆ. ಯಾರ ಕೈವಾಡವಿದೆ ಎಂದು ನಿಮಗೂ ತಿಳಿದಿರುತ್ತದೆ. ಅಮಾಯಕ ರೈತರನ್ನು ಬಂಧಿಸಬೇಡಿ. ಟಿಪ್ಪು ಜಯಂತಿ ಆಚರಣೆ ಮಾಡಲು ತೋರಿಸಿದ ಆಸಕ್ತಿಯನ್ನು ಸಾಲ ಮನ್ನಾದಲ್ಲಿ ಏಕೆ ತೋರಿಸುತ್ತಿಲ್ಲ' ಎಂದು ಬಿಜೆಪಿ ನಾಯಕ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ











Click it and Unblock the Notifications