ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು ಗಲಭೆ ವಿಡಿಯೋ; ಎಚ್. ಡಿ. ಕುಮಾರಸ್ವಾಮಿ ಟ್ವೀಟ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 24 : "ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಗಳೂರು ಪೊಲೀಸರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್ 19ರಂದು ನಡೆದ ಪ್ರತಿಭಟನೆಯ ಫೋಟೋ, ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಗೋಲಿಬಾರ್‌ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ಮಂಗಳೂರು ಗೋಲಿಬಾರ್‌ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ

ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋ, ಫೋಟೋಗಳ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ. ಪ್ರತಿಪಕ್ಷದ ನಾಯಕರು ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಮಂಗಳೂರು ಗಲಭೆ; ಪೊಲೀಸರಿಂದ ಫೋಟೋ ಬಿಡುಗಡೆ ಮಂಗಳೂರು ಗಲಭೆ; ಪೊಲೀಸರಿಂದ ಫೋಟೋ ಬಿಡುಗಡೆ

ಎಚ್. ಡಿ. ಕುಮಾರಸ್ವಾಮಿ ತಮ್ಮ ಟ್ವೀಟ್‌ನಲ್ಲಿ, "ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ, ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ

ಎಚ್. ಡಿ. ಕುಮಾರಸ್ವಾಮಿ

ಎಚ್. ಡಿ. ಕುಮಾರಸ್ವಾಮಿ

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ, "ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಲಕ್ಷ ಜನ ಸೇರಿದರೂ ಶಾಂತಿಯುತವಾಗಿ ನಡೆದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಲು ಕಾರಣವೇನು?" ಎಂದು ಪ್ರಶ್ನೆ ಮಾಡಿದ್ದಾರೆ.

ಕೋಮು ಪ್ರಯೋಗ ಶಾಲೆ

ಕೋಮು ಪ್ರಯೋಗ ಶಾಲೆ

"ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ?. ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಕಲ್ಲು ತೂರಾಟದ ವಿಡಿಯೋ

ಕಲ್ಲು ತೂರಾಟದ ವಿಡಿಯೋ

"ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?. ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಉತ್ತರ ಕೊಡುವರೇ?

ಉತ್ತರ ಕೊಡುವರೇ?

"ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ, ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

English summary
Former Chief Minister H.D.Kumaraswamy tweet against photos and video released by Mangaluru police. On December 19, 2019 two killed in police golibar at Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X