ಡಿ.ಸಿ.ತಮ್ಮಣ್ಣ ಅವರಿಗೆ ಟ್ವಿಟರ್ನಲ್ಲಿ ಕುಮಾರಸ್ವಾಮಿ ಕಿವಿಮಾತು
Recommended Video
ಬೆಂಗಳೂರು, ಜೂನ್ 09 : ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ಹರಿಹಾಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಿಗೆ ಬುದ್ಧಿವಾದ ಹೇಳಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. 'ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ' ಎಂದು ಕರೆ ನೀಡಿದ್ದಾರೆ.

'ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ ಸಾರ!' ಎಂದು ಟ್ವೀಟ್ ಮಾಡಿದ್ದಾರೆ.
ಮದ್ದೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಡಿ.ಸಿ.ತಮ್ಮಣ್ಣ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಬಳಿಕ ಜನರು ಅವರನ್ನು ಭೇಟಿ ಮಾಡಲು ಬಂದಿದ್ದರು. ಆಗ ಅವರ ವಿರುದ್ಧ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
'ಜೋಡೆತ್ತುಗಳು ಬರುತ್ತವೆ. ಕರೆದು ಹತ್ತಿಸಿಕೊಳ್ಳಿ. ಈಗ ಮಡೆಗಾರಿಕೆ ಮಾಡಲು ಹತ್ತಿರ ಬರುತ್ತೀರಾ?. ಚುನಾವಣೆ ಸಂದರ್ಭದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ನೆನಪಿಸಿಕೊಂಡಿರಾ? ಈಗ ಬಂದು ಮಾತನಾಡುತ್ತೀರಾ?' ಎಂದು ಹರಿಹಾಯ್ದಿದ್ದರು.
ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ - ಸಾರ!
— H D Kumaraswamy (@hd_kumaraswamy) June 9, 2019
ಡಿ.ಸಿ.ತಮ್ಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, 'ಕ್ಷೇತ್ರದ ಜನರ ಕೆಲಸ ಮಾಡಿಕೊಡಲು ಆಗದೇ ಇದ್ದರೆ ಡಿ.ಸಿ.ತಮ್ಮಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಡೆಯಲಿ' ಎಂದು ಹೇಳಿದ್ದರು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications