ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಮ ರಾಜಕೀಯ ಭವಿಷ್ಯ ನೋಡಿಕೊಳ್ಳಿ; ಗೌಡರಿಗೆ ಹೆಚ್‌ಡಿಕೆ ತಿರುಗೇಟು!

|
Google Oneindia Kannada News

ಬೆಂಗಳೂರು, ಡಿಸೆಂಬರ್ 21: "ನನ್ನ ಬಗ್ಗೆ ಪದೇ-ಪದೇ ಚರ್ಚೆ ಮಾಡಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ನೋಡಿಕೊಳ್ಳಿ" ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಸೋಮವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಎಚ್. ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದರು. "ಮೈತ್ರಿ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಕಾರಣ‌" ಎಂಬ ಜಿ. ಟಿ. ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಜೆಡಿಎಸ್ ಮುಖಂಡ ಜಿಟಿ ದೇವೇಗೌಡರಿಗೆ ಡಿಸಿಎಂ ಸ್ಥಾನದ ಆಫರ್! ಜೆಡಿಎಸ್ ಮುಖಂಡ ಜಿಟಿ ದೇವೇಗೌಡರಿಗೆ ಡಿಸಿಎಂ ಸ್ಥಾನದ ಆಫರ್!

HD Kumaraswamy Upset With Chamundeshwari MLA GT Deve Gowda

ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ್ದ ಜಿ. ಟಿ. ದೇವೇಗೌಡರು, "ಕುಮಾರಸ್ವಾಮಿ ಅವರಿಗೆ ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು. ಗೊತ್ತಿದ್ದರೂ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು" ಎಂದು ಹೇಳಿದ್ದರು.

ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲು; ಗೌಡರು ಹೇಳಿದ್ದೇನು? ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲು; ಗೌಡರು ಹೇಳಿದ್ದೇನು?

ಸೋಮವಾರ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, "ಸರ್ಕಾರ ಉಳಿಸುವುದು ದೊಡ್ಡ ವಿಚಾರವಾಗಿರಲಿಲ್ಲ. ನಾನೂ ಅಡ್ಡದಾರಿಯಲ್ಲಿ ಬಿಜೆಪಿ ಶಾಸಕರನ್ನು ಸೆಳೆಯಬಹುದಿತ್ತು" ಎಂದರು.

ಕುತೂಹಲ ಮೂಡಿಸಿದ ದೇವೇಗೌಡ-ಡಿ.ಕೆ. ಶಿವಕುಮಾರ್ ಭೇಟಿ!ಕುತೂಹಲ ಮೂಡಿಸಿದ ದೇವೇಗೌಡ-ಡಿ.ಕೆ. ಶಿವಕುಮಾರ್ ಭೇಟಿ!

"ಸರ್ಕಾರವನ್ನು ಉಳಿಸಿ ಏನು ಕಡಿದು ಕಟ್ಟೆ ಹಾಕಬೇಕಿತ್ತು. ನನ್ನ ಬಗ್ಗೆ ಪದೇಪದೇ ಚರ್ಚೆ ಮಾಡಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ನೋಡಿಕೊಳ್ಳಿ" ಎಂದು ಎಚ್. ಡಿ. ಕುಮಾರಸ್ವಾಮಿ ಜಿ. ಟಿ. ದೇವೇಗೌಡರಿಗೆ ಹೇಳಿದರು.

ಜಿ. ಟಿ. ದೇವೇಗೌಡರು, "ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು" ಎಂದು ಹೇಳಿದ್ದರು.

"ಶಾಸಕರು ಪಕ್ಷ ಬಿಡದಂತೆ ತಡೆಯುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಲಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌" ಎಂದು ಜಿ. ಟಿ. ದೇವೇಗೌಡ ಹೇಳಿಕೆ ಕೊಟ್ಟಿದ್ದರು.

Recommended Video

Rahul Dravid ಅವರನ್ನು ಶೀಘ್ರದಲ್ಲೇ ಆಸ್ಟ್ರೇಲಿಯಾಗೆ ಕಳುಹಿಸಿ | Oneindia Kannada

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜಿ. ಟಿ. ದೇವೇಗೌಡರು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅವರು ಬಿಜೆಪಿ ನಾಯಕರನ್ನು ಆಗಾಗ ಹೊಗಳುತ್ತಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

English summary
Don't talk about me look on your political career former chief minister H. D. Kumaraswamy reply for the Chamundeshwari JD(S) MLA G. T. Deve Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X