ಅಜ್ಞಾನ ಹೋಗಲಾಡಿಸುತ್ತೇನೆ ಬರಲಿ; ಹೊಸ ಸಚಿವರಿಗೆ ಎಚ್ಡಿಕೆ ಆಹ್ವಾನ!
ಬೆಂಗಳೂರು, ಮೇ 31; 'ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಆಹ್ವಾನ ನೀಡಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಬಗ್ಗೆ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಮೊದಲ ಟ್ವೀಟ್ನಲ್ಲಿ, 'ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, 'ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ' ಎಂದು ಆಹ್ವಾನ ನೀಡಿದ್ದಾರೆ.

'ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳು; ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಮಂಗಳವಾರ ಸಹ ಅವರು ಈ ಕುರಿತು ಟ್ವೀಟ್ ಮಾಡಿದ್ದರು. 'ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?' ಎಂದು ಪ್ರಶ್ನೆ ಕೇಳಿದ್ದರು.
'ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ಗ್ಯಾರಂಟಿ ಬೇಡಿಕೆಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ Indian National Congress - Karnataka ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ Siddaramaiah, ಶ್ರೀ DK Shivakumar ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.
'ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ?' ಎಂದು ಕಾಂಗ್ರೆಸ್ ಸರ್ಕಾರವನ್ನು ಅವರು ಪ್ರಶ್ನೆ ಮಾಡಿದ್ದರು.
'ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ' ಎಂದು ಕುಮಾರಸ್ವಾಮಿ ಹೇಳಿದ್ದರು.
'ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ' ಎಂದಿದ್ದರು.
'ಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ' ಎಂದು ಸಚಿವರ ವಿರುದ್ಧವೂ ಟೀಕಿಸಿದ್ದರು.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ











Click it and Unblock the Notifications