ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ರಾಜಕೀಯ,ಅವರ ಜೊತೆಗೇ ಇದ್ದು ನೋಡಿದ್ದೇನೆ : ಎನ್. ಚಲುವರಾಯಸ್ವಾಮಿ
ಮಂಡ್ಯ, ಅಕ್ಟೋಬರ್ 02: ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ರಾಜಕೀಯ. ಅವರ ಜೊತೆಗೇ ಇದ್ದು ನೋಡಿದ್ದೇನೆ. ನಾನು ತಪ್ಪು ಮಾಡಿಲ್ಲ, ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕಿ ಇರಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಪತಿ ಅವರಿಗೆ ಮಾನಸಿಕ ಹಿಂಸೆ ಆಗಬಾರದು ಎಂಬ ಕಾರಣದಿಂದ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಅವರೇ ಹೇಳಿದ್ದಾರೆ. ಇದು ಹಿಟ್ ಅಂಡ್ ರನ್ ಅಥವಾ ಯೂಟರ್ನಾ ಎಂದು ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಎಡಿಜಿಬಿ ಮೇಲೆ ಬಿದ್ದಿದ್ದಾರೆ ಈ ದೇಶದಲ್ಲಿ ಯಾರು ಏನು ಬೇಕಾದರೂ ಮಾತನಾಡಬಹುದು. ಕಾನೂನಿನಲ್ಲಿ ಅಧಿಕಾರಿಗಳಿಗೆ ಒಂದು ಲಿಮಿಟೇಷನ್ ಇರುತ್ತೆ. ಅವರೂ ಕೂಡ ಈ ದೇಶದ ಪ್ರಜೆ, ಕಾನೂನಾತ್ಮಕ ವಿಚಾರವನ್ನುಅಧಿಕಾರಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅದನ್ನು ಮೊದಲು ಎದುರಿಸಲಿ, ಕುಮಾರಸ್ವಾಮಿ ಮಾತನಾಡಿದ್ದು ಸರಿ ಎಂದು ದೇವೇಗೌಡರೇ ಹೇಳಲಿ. ಅದನ್ನು ನಾನು ಒಪ್ಪುತ್ತೇನೆ. ಅರ್ಜುನನ ಹಿಂದೆ ಕೃಷ್ಣ ಇದ್ದಂತೆ ಕುಮಾರಸ್ವಾಮಿ ಹಿಂದೆ ದೇವೇಗೌಡರು ಇದ್ದಾರೆ. ಅದಕ್ಕೆ ಅವರು ಏನೆಲ್ಲಾ ಮಾತನಾಡಬಹುದೋ ಮಾತನಾಡುತ್ತಾರೆ ಎಂದು ಹೇಳಿದರು.
ಕುಮಾರಸ್ವಾಮಿ ಕೇಂದ್ರದ ಒಳ್ಳೆಯ ಸಚಿವರು. ಅವರು ಕೇಂದ್ರ ಸರ್ಕಾರದ ಕೆಲಸಗಳನ್ನು ಮಾಡಬೇಕು. ರಾಜ್ಯಕ್ಕೆ ಅಗತ್ಯವಾದ ಯೋಜನೆಗಳನ್ನು ತರಬೇಕು. ಅದು ಬಿಟ್ಟು ವಾರಕ್ಕ ಮೂರು ದಿನ ಬೆಂಗಳೂರಿಗೆ ಬರುತ್ತಾರೆ. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಆ ಮಾತು ಬಳಕೆ ಮಾಡೋಕೆ ಬರಲ್ಲ. ದೇವೇಗೌಡರೇ ಹೇಳಲಿ ತಮ್ಮ ಮಗ ಮಾತನಾಡುತ್ತಿರುವುದು ಸರಿಯೋ ತಪ್ಪೋ ಎಂದು ಅದಕ್ಕೆ ನಾನು ಒಪ್ಪುತ್ತೇನೆ ಎಂದು ಹೇಳಿದರು.
ಕುಮಾರಸ್ವಾಮಿಯೇ ಜಾಮೀನಿನ ಮೇಲೆ ಇದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ನೀಡುವಂತೆ ರಾಜ್ಯಪಾಲರ ಬಳಿ ಹೋಗಿದ್ದವರು ಯಾರು, ಅದಕ್ಕೆ ಮೊದಲು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.
ಮಂಡ್ಯ ಮುಡಾ ಹಗರಣ ಅಂತರರಾಜ್ಯ ವ್ಯವಹಾರ ಇತ್ತು. ಹಾಗಾಗಿ ಅದನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಬ್ಯಾಂಕ್ನಲ್ಲಿ ದುಡ್ಡು ಡ್ರಾ ಮಾಡಿದ್ದು ಇದೆ. ಈ ಕಾರಣದಿಂದಾಗಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಸಮರ್ಥಿಸಿಕೊಂಡರು.
ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಹಾಗಾಗಿ ದಲಿತ ಸಿಎಂ ಅಥವಾ ಬೇರೆ ಎಂಬ ಬಗ್ಗೆ ಚರ್ಚೆಯ ಪ್ರಶ್ನೆಯೇ ಇಲ್ಲ. ದಲಿತ ಮಂತ್ರಿಗಳು ಶಾಸಕರು ಮುಡಾ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆಯೇ ಹೊರತು ಮುಖ್ಯಮಂತ್ರಿ ಹುದ್ದೆಗೆ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಶ್ವತವಾಗಿ ಕಾವೇರಿ ಆರತಿ ಆಗಬೇಕು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ಇದೆ. ಸ್ಪಷ್ಟ ನಿರ್ಧಾರ ಮಾಡುತ್ತೇವೆ. ಸಂಪೂರ್ಣ ತೀರ್ಮಾನ ಡಿಸಿಎಂ ಅವರದ್ದೇ ಆಗಿದೆ. ಸಧ್ಯಕ್ಕೆ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಶೀಘ್ರ ಜಾಗ ಗುರುತಿಸಿ ಅಂತಿಮ ತೀರ್ಮಾನ ಮಾಡುತ್ತೇನೆ. ಸಧ್ಯ ಶಾಸಕರ ನೇತೃತ್ವದಲ್ಲಿ ಸೀಮಿತವಾದ ಕಾರ್ಯಕ್ರಮ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾವೇರಿ ಆರತಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯತೆ ಸಹಿಸದೆ ಸರ್ಕಾರನ್ನು ಕಸರತ್ತು ನಡೆಸಿದ್ದರು. ಆಗಲಿಲ್ಲ. ಈಗ ಮೂಡ ವಿಚಾರವನ್ನು ಎತ್ತಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರು ಮುಡಾ ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಪತಿ ಸಿದ್ದರಾಮಯ್ಯನವರ 40 ವರ್ಷದ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಸೈಟ್ ವಿಚಾರಕ್ಕೆ ಅವರಿಗೆ ಕಳಂಕ ಬರುವುದು ಬೇಡ ಎಂಬ ಕಾರಣದಿಂದ ವಾಪಸ್ಸು ನೀಡಿದ್ದಾರೆ. ಇದರಲ್ಲಿ ತಪ್ಪೇನಿದೆ, ಕಾಂಗ್ರೆಸ್ ಸರ್ಕಾರದಲ್ಲಿ, ಸಿದ್ದರಾಮಯ್ಯ ಅವರು ಸೈಟ್ ನೀಡಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿವೇಶನ ನೀಡಿದ್ದರು. ಆದರೂ ವಾಪಸ್ಸು ಕೊಟ್ಟಿದ್ದಾರೆ ಎಂದು ಹೇಳಿದರು.
ಕಾನೂನು ಬದ್ಧವಾಗಿ ತಪ್ಪಾಗಿದ್ದರೆ ಕೊಟ್ಟವರ ತಪ್ಪಾಗುತ್ತೆ ವಿನಃ, ಪಡೆದವರ ತಪ್ಪಲ್ಲ, ಅರ್ಜಿ ಕೊಟ್ಟರೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದದ್ದು ಅವತ್ತಿನ ಸರ್ಕಾರದ ಹೊಣೆ. ಅದು ಬಿಟ್ಟು ಈಗಿನ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮುಡಾ ಹಗರಣದ ಬಗ್ಗೆ ಜನರಿಗೆ ಈಗಾಗಲೇ ಅರ್ಥವಾಗಿದೆ. ಆದರೆ ಜೆಡಿಎಸ್-ಬಿಜೆಪಿಯವರಿಗೆ ಅರ್ಥವಾಗುತ್ತಿಲ್ಲ. 136 ಶಾಸಕರು ಆಯ್ಕೆಯಾಗಿರುವುದಕ್ಕೆ ವಿಪಕ್ಷಗಳಿಗೆ ಕಣ್ಣು ಕುಕ್ಕುತ್ತಿದೆ. ಏನೂ ಸಿಗದ ಕಾರಣ ಈ ವಿಚಾರವನ್ನು ಎತ್ತಿದ್ದಾರಷ್ಟೆ ಎಂದು ಸ್ಪಷ್ಟಪಡಿಸಿದರು.
-
ಮಧ್ಯಪ್ರಾಚ್ಯ ಸಂಘರ್ಷ: ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ -
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ












Click it and Unblock the Notifications