ಮಂಡ್ಯದಿಂದ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಚ್ಡಿ ರೇವಣ್ಣ ಸ್ಪರ್ಧೆ: ಇದು ಅಣ್ಣ-ತಮ್ಮನ ಸ್ಪರ್ಧೆ ನಾ?
ಮಂಡ್ಯ, ಏಪ್ರಿಲ್ 05: ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ತೀವ್ರ ಕುತೂಹಲ ಮೂಡಿಸಿದೆ. ಬೇಸಿಗೆಯ ಬಿಸಿಲಿನ ಕಾವಿಗಿಂತ ಚುನಾವಣಾ ಕಾವು ಏರುತ್ತಿದ್ದು, ಆಡಳಿತರೂಢ ಕಾಂಗ್ರೆಸ್ ನಿಂದ ಸ್ಟಾರ್ ಚಂದ್ರ ಅಭ್ಯರ್ಥಿಯಾಗಿದ್ರೆ, ಇತ್ತ ಕಾಂಗ್ರೆಸ್ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಕಣಕ್ಕಿಳಿಸಿದ್ದಾರೆ.
ಹೌದು, ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಖುದ್ದು ಕಣಕ್ಕಿಳಿದಿದ್ದು, ಮಂಡ್ಯದಲ್ಲಿ ಈ ಬಾರಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ದೊಡ್ಡ ಸವಾಲು ಎದುರಾಗಿದೆ. ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಕಣದಲ್ಲಿದ್ದು, ಕುಮಾರಸ್ವಾಮಿ ಅವರ ವಿರುದ್ಧವಾಗಿ ಹೆಚ್ ಡಿ ರೇವಣ್ಣ ಕಣಕ್ಕಿಳಿದಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತ ಕುಮಾರಸ್ವಾಮಿ ಅವರನ್ನ ಸೋಲಿಸುವ ನಿಟ್ಟಿನಲ್ಲಿ ಆಡಳಿತರೂಢ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ನಡೆಸಿದ್ರೆ, ಇತ್ತ ಎಚ್ಡಿ ಕುಮಾರಸ್ವಾಮಿಯವರಿಗೆ ಸೋಲಿನ ರುಚಿ ಉಣ್ಣಿಸಲು ಎಚ್ಡಿ ರೇವಣ್ಣ ಅವರೇ ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಕುಮಾರಸ್ವಾಮಿ ಅವರ ವಿರುದ್ಧ ಹೆಚ್ ಡಿ ರೇವಣ್ಣ ಅವರು ಕಣಕ್ಕಿಳಿದಿರುವುದು ಹಲವು ಗೊಂದಲಗಳಿಗೆ ಕಾರಣವಾಗುತ್ತಾ ಎನ್ನುವ ಚರ್ಚೆ ಶುರುವಾಗಿದೆ.
ಕೊನೆಗೂ ಮೈತ್ರಿಯಿಂದ ಮಂಡ್ಯ ಕ್ಷೇತ್ರವನ್ನ ಪಡೆಯುವಲ್ಲಿ ಯಶಸ್ವಿಯಾದ ದಳಪತಿಗಳಿಗೆ ಮತ್ತೊಂದು ಸವಾಲ್ ಎದುರಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಚ್ಡಿ ರೇವಣ್ಣ ಅವರೇ ಖುದ್ದು ಮಂಡ್ಯ ಕಣಕ್ಕಿಳಿದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ನಡೆಸಿದ್ರೆ, ಈ ಚುನಾವಣೆಯಲ್ಲಿ ಅಣ್ಣ ತಮ್ಮಂದಿರ ಮಧ್ಯೆ ಕದನ ಶುರುವಾಯ್ತಾ ಎಂದು ನೀವು ಪ್ರಶ್ನಿಸಬಹುದು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಚ್ಡಿ ರೇವಣ್ಣ ಅವರೇ ಸ್ಪರ್ಧೆ ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾರೆ. ಆದರೆ ನೀವು ತಿಳಿದುಕೊಂಡಂತೆ ಇವರು ಕುಮಾರಸ್ವಾಮಿ ಅವರ ಸಹೋತರ ಹೆಚ್ ಡಿ ರೇವಣ್ಣ ಅಲ್ಲ, ಇವರು ಬೇರೆ ಎಚ್ ಡಿ ರೇವಣ್ಣ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಎಚ್ಡಿ ರೇವಣ್ಣ ಎಂಬುವರು ಸ್ಪರ್ಧಿಸುತ್ತಿದ್ದಾರೆ. ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಎಚ್ಡಿ ರೇವಣ್ಣ ತಮ್ಮ ನಾಮಪತ್ರ ಸಲ್ಲಿಸಿದ್ದು, ಮಂಡ್ಯದಿಂದ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧವಾಗಿ ಹೆಚ್ ಡಿ ರೇವಣ್ಣ ಸ್ಪರ್ಧೆ ಎಂದರೇ ಜನಸಾಮಾನ್ಯರಿಗೂ ಸಹ ಅನುಮಾನ ಮೂಡುವುದರಲ್ಲಿ ಎರಡು ಮಾತಿಲ್ಲ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications