ಸಿಎಂ ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಹೋಗಲಿ. ಸಂತೋಷ: ಹೆಚ್ ಡಿ ರೇವಣ್ಣ
ಹಾಸನ, ಅಕ್ಟೋಬರ್ 18: ಜೆಡಿಎಸ್ ವಿರುದ್ದ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ನಮ್ಮದೇ ಒರಿಜನಲ್ ಜೆಡಿಎಸ್ ಪಾರ್ಟಿ ಎಂದಿದ್ದಾರೆ. ಈ ಬಗ್ಗೆ ದೇವೇಗೌಡರ ಅಂಗಳದಲ್ಲಿ ಚೆಂಡು ಇದೆ. ರಾಷ್ಟ್ರೀಯ ಅಧ್ಯಕ್ಷರಿದ್ದಾರೆ ತೀರ್ಮಾನ ಮಾಡುತ್ತಾರೆ. ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಹೋಗಲಿ. ಸಂತೋಷ, ನಮ್ಮದೇನು ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಹೆಚ್ಡಿ ರೇವಣ್ಣ ಹೇಳಿದರು.
ಈ ಕುರಿತು ಬುಧವಾರ ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಮಾತನಾಡಿರುವುದರ ಹಿಂದೆ ಕಾಂಗ್ರೇಸ್ ಕುತಂತ್ರವಿದೆ. ಸಿಎಂ ಇಬ್ರಾಹಿಂ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡುವದಾಗಿ ಪಕ್ಷ ತೀರ್ಮಾನಿಸಿದೆ ಎಂಬ ಹೇಳಿಕೆಗೆ ತಿರುಗೇಟು ನೀಡಿದರು.

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ, ಬೇಸರಗೊಂಡ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಮ್ಮ ಬೆಂಬಲಿಗರ ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿ, ಸಭೆಯಲ್ಲಿ ನಮ್ಮದೆ ಓರಿಜಿನಲ್ ಜೆಡಿಎಸ್ ಎಂದು ಹೇಳಿದ್ದಾರೆ. ಅದನ್ನ ಮಾಜಿ ಪ್ರಧಾನಿ ದೇವೇಗೌಡರೇ ಕೂತು ಬಗೆಹರಿಸುತ್ತಾರೆ. ಇಂತಹ ಮಾತಿಗೆಲ್ಲ ತಲೆ ಕೂಡಿಸಿ ಕೊಳ್ಳುವುದು ಬೇಡ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಯಾರನ್ನು ಉಚ್ಛಾಟನೆ ಮಾಡ್ತಾರೆ, ಏನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಗುಡುಗಿದರು.
ದೇವೇಗೌಡರ ಅಂಗಳದಲ್ಲಿ ಚೆಂಡು ಇದೆ. ಅವರು ರಾಷ್ಟ್ರೀಯ ಅಧ್ಯಕ್ಷರಿದ್ದಾರೆ ತೀರ್ಮಾನ ಮಾಡುತ್ತಾರೆ. ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಸಂತೋಷ, ನಮ್ಮದೇನು ಅಭ್ಯಂತರವಿಲ್ಲ. ಜೆಡಿಎಸ್ ಇಬ್ಭಾಗ ಆಗಲ್ಲ, 19 ಜನ ಎಂಎಲ್ಎಗಳು ಇದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಕುಮಾರಸ್ವಾಮಿ ಈ ಪಾರ್ಟಿಗಾಗಿ ಏನೇನು ಮಾಡಿದ್ದಾರೆ ಅಂತ ಜನರಿಗೆ ಗೊತ್ತಿದೆ.ಅವರ ಮಾತಿಗೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಾ? ಆ ಸಭೆಯಲ್ಲಿ ಯಾರು ಕುಳಿತಿದ್ದಾರೆ ನೋಡಿದ್ರಾ? ಜೆ.ಹೆಚ್.ಪಟೇಲ್ ಮಗನನ್ನು ಕೂರಿಸಿಕೊಂಡು ಸಭೆ ಮಾಡಿದ್ದಾರೆ. ದೇವೇಗೌಡರನ್ನು 60 ವರ್ಷ ಕಾಂಗ್ರೆಸ್ ಹೇಗೆ ನೆಡೆಸಿಕೊಂಡಿದೆ ಎಂಬುವುದು ಗೊತ್ತಿದೆ. ಕುಮಾರಸ್ವಾಮಿ ಮಗನನ್ನು ಸೋಲಿಸಿದವರು ಯಾರು? ಎಂದು ಪ್ರಶ್ನಿಸಿದರು.
ಅಂತಹ ಕಾಂಗ್ರೆಸ್ಗೆ ಹೋಗಿ ಬೀಳುತ್ತೀರಾ? ಅಂದರೆ ನಮಗೇನು ಅಭ್ಯಂತರ ಇಲ್ಲ. ಕಾಂಗ್ರೆಸ್ ಅನ್ನು ಇಬ್ರಾಹಿಂ ಮುಗಿಸಿ ಆಯ್ತು. ಈಗ ನಮ್ಮ ಹತ್ತಿರ ಬಂದಿದ್ದಾರೆ. ಇವತ್ತು ಒರಿಜಿನಲ್ ಕಾಂಗ್ರೆಸ್ ಇಲ್ಲ. ನೆಹರು, ಗಾಂಧಿ ಕಾಲದ ಕಾಂಗ್ರೆಸ್ ಈಗ ಇಲ್ಲ. ಇಂತಹ ಕಾಂಗ್ರೆಸ್ಗೆ ಹೆದರುವುದಾದರೆ ಮನೆ ಸೇರಿಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ನ ಇಂತಹ ಕುತಂತ್ರಕ್ಕೆ ನಾವು ಹೆದರುವುದಿಲ್ಲ. ಸ್ವಲ್ಪ ದಿನ ತಡೆಯಿರಿ ಕಾಲವೇ ನಿರ್ಧರಿಸುತ್ತೆ ಎಂದು ವಾಗ್ದಾಳಿ ಮಾಡಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications