ಸಂಪುಟ ರಚನೆಯಲ್ಲಿ ನನ್ನ ಪಾತ್ರವಿಲ್ಲ: ಎಚ್.ಡಿ. ದೇವೇಗೌಡ ಸ್ಪಷ್ಟನೆ
ಬೆಂಗಳೂರು, ಮೇ 22: ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಪತ್ರಿಕೆಗಳಲ್ಲಿ ಇಂದು ಪ್ರಕಟವಾಗಿರುವ ಸುದ್ದಿಯ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ .
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾಂಗೆಸ್ ನಾಯಕರಲ್ಲಿ ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರನ್ನು ಸಂಪುಟಕ್ಕೆ ಸೇರ್ಪಡಿಸಲು ತಮ್ಮ ವಿರೋಧವಿದೆ ಎಂಬ ಅರ್ಥದಲ್ಲಿ ಪ್ರಕಟವಾಗುವ ಸುದ್ದಿ ಕುಚೋದ್ಯದಿಂದ ಕೂಡಿದ್ದು ಜನರನ್ನು ದಾರಿತಪ್ಪಿಸುವ ಕೆಲಸವಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ರಚನೆಯನ್ನು ನಿಯೋಜಿತ ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚಿಸಿ ನಿರ್ಧರಿಸಲಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಮಾಧ್ಯಮ ಸುದ್ದಿ ಪ್ರಕಟಣೆಗೆ ಮುನ್ನ ಅಧಿಕೃತ ಮಾಹಿತಿ ಪಡೆಯಬೇಕು .ಈ ರೀತಿಯ ಆಧಾರ ರಹಿತ ಸುದ್ದಿ ಪ್ರಕಟಣೆ ಪತ್ರಿಕೋದ್ಯಮಕ್ಕೆ ಮಾರಕ ಎಂದಿದಿದ್ದಾರೆ.












Click it and Unblock the Notifications