ಖರ್ಗೆ ಅವರನ್ನು ಸಿಎಂ ಮಾಡಿ ಎಂದಿದ್ದೆ, ಆದರೆ ಅವರು ಒಪ್ಪಲಿಲ್ಲ!
ಬೆಂಗಳೂರು, ಅ. 23: ಉಪ ಚುನಾವಣೆಯ ಸಂದರ್ಭದಲ್ಲಿ ಒಂದೊಂದಾಗಿ ರಾಜಕೀಯ ಗುಟ್ಟುಗಳು ಹೊರಗೆ ಬರುತ್ತಿವೆ. ಕಳೆದ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಕುರಿತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶಿರಾ ಉಪ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ್ದಾರೆ. ಪುತ್ರ ಎಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ನಾನು ಒಪ್ಪಿರಲಿಲ್ಲ ಎಂಬ ಸ್ಪೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ.
ಆದರೆ ದೇವೇಗೌಡರು ಸೂಚಿಸಿದ್ದ ಕಾಂಗ್ರೆಸ್ ನಾಯಕರನ್ನು ರಾಜ್ಯದ ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಲಿಲ್ಲವಂತೆ. ಕೊನೆಗೆ ವಿಧಿಯಿಲ್ಲದೆ ನಾನು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದನ್ನು ಒಪ್ಪಿಕೊಂಡೆ ಎಂದು ಅವರು ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ. ಆ ಮೂಲಕ ಈಗ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಉಂಟಾಗುವ ಸಾಧ್ಯೆತಗಳಿವೆ. ಹಾಗಾದರೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸೂಚಿಸಿದ ಆ ನಾಯಕ ಯಾರು? ಕಾಂಗ್ರೆಸ್ ಹೈಕಮಾಂಡ್ ಯಾಕೆ ದೇವೇಗೌಡರ ಸಲಹೆಯನ್ನು ಒಪ್ಪಲಿಲ್ಲ? ಮುಂದೆ ಓದಿ!

ಕಾಂಗ್ರೆಸ್ನವರೇ ಸಿಎಂ ಆಗಲಿ ಎಂದಿದ್ದೆ
ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಗುಲಾಮ್ ನಬಿ ಆಜಾದ್ ಹಾಗೂ ಈಗ ರಾಜಸ್ಥಾನದ ಮುಖ್ಯಮಂತ್ರಿ ಆಗಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಮ್ಮ ಮನೆಗೆ ಬಂದಿದ್ದರು. ನಮೆಗೆ ಬಂದಾಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದರು. ಆದರೆ ಅವರ ಸಲಹೆಗೆ ನಾನು ಒಪ್ಪಿರಲಿಲ್ಲ. ನಾನು ಕಾಂಗ್ರೆಸ್ ನಾಯಕರನ್ನೇ ಮುಖ್ಯಮಂತ್ರಿ ಹುದ್ದೆಗೆ ಸೂಚಿಸಿದ್ದೆ ಎಂದು ದೇವೇಗೌಡರು ಪ್ರಚಾರದಲ್ಲಿ ಹೇಳಿದರು.

ಖರ್ಗೆ ಅವರ ಹೆಸರು ಸೂಚಿಸಿದ್ದೆ
ಮನೆಗೆ ಬಂದಿದ್ದ ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸದ್ಯ ಮುಖ್ಯಮಂತ್ರಿ ಆಗುವುದು ಬೇಡ. ಹಿರಿಯರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳಿದ್ದೆ. ಆಗ ಆಜಾದ್ ಹಾಗೂ ಗೆಹ್ಲೊಟ್ ಅವರು, ಇಲ್ಲಾ ಸರ್ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಂತ ನಾವು ತೀರ್ಮಾನ ಮಾಡಿದ್ದೇವೆ ಎಂದರು. ಅವರು ತೀರ್ಮಾನ ಮಾಡಿಕೊಂಡೇ ಬಂದಮೇಲೆ ನಾನೆಷ್ಟು ಹೇಳಬಹುದು ಎಂದು ದೇವೇಗೌಡರು ಭಾಷಣದಲ್ಲಿ ಪ್ರಶ್ನೆ ಮಾಡಿದರು.

ನಮ್ಮ ಮೇಲೆ ಈಗ ಇಲ್ಲಸಲ್ಲದ ಆರೋಪ
ಈಗ ಸುಖಾಸುಮ್ಮನೆ ನಮ್ಮ ಮೇಲೆಯೇ ಸಲ್ಲದ ಆರೋಪಗಳನ್ನು ರಾಜ್ಯದ ಕೆಲವು ನಾಯಕರು ಮಾಡುತ್ತಿದ್ದಾರೆ. ನಾನೇ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ಎಂದು ಸಲಹೆ ಮಾಡಿದ್ದೆ. ಆದರೆ ಅದನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿತ್ತು. ಆ ಮೇಲೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದು ಎಂದು ಕಾಂಗ್ರೆಸ್ ಜೊತೆಗಿನ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನಡೆದಿದ್ದನ್ನು ದೇವೇಗೌಡರು ಮೊದಲ ಬಾರಿ ಬಹಿರಂಗಪಡಿಸಿದರು.
Recommended Video

ದಿ. ಮಾಜಿ ಶಾಸಕ ಸತ್ಯನಾರಾಯಣ ವ್ಯಕ್ತಿತ್ವ
ಕೆಲವು ದಿನಗಳ ಹಿಂದೆ ರಾಷ್ಟ್ರೀಯ ಪಕ್ಷವೊಂದು ದಿ. ಮಾಜಿ ಶಾಸಕ ಸತ್ಯನಾರಾಯಣ ಅವರಿಗೆ ಆಮಿಷ ಒಡ್ಡಿತ್ತು. ಆದರೆ ಅದಕ್ಕೆ ತಲೆಬಾಗದೆ ಪಕ್ಷದ ಜೊತೆ ನಿಂತ ಮಹಾನ್ ವ್ಯಕ್ತಿ ಅವರು. ಅಂಥವರ ಶ್ರೀಮತಿ ಅವರು ವಿಧಾನಸಭೆಗೆ ಹೋಗಲೇಬೇಕು. ಅವರು ಶಾಸಕರಾಗಲು ಶಿರಾ ಜನತೆಯ ಆಶೀರ್ವಾದ ಬೇಕು. ದಯಮಾಡಿ ಈ ಬಾರಿ ಅಮ್ಮಾಜಮ್ಮ ಅವರನ್ನು ಗೆಲ್ಲಿಸಬೇಕೆಂದು ತಮ್ಮಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವೇಗೌಡರು ಪ್ರಚಾರ ಭಾಷಣವನ್ನು ಮುಗಿಸಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications