ಫೆಬ್ರವರಿ ಒಳಗೆ ಶಿಕ್ಷಕರ ವರ್ಗಾವಣೆ: ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 17: ಫೆಬ್ರವರಿ ಒಳಗೆ ಶಿಕ್ಷಕರ ವರ್ಗಾವಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಈ ವರ್ಷ ವರ್ಗಾವಣೆಯಲ್ಲಿ ಸಾಕಷ್ಟು ತೊಂದರೆಯಾಗಿದೆ. ಇದೀಗ ಈ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಫೆಬ್ರವರಿಯೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಬಡವರಿಗೆ ಮಾತ್ರ ಸೀಮಿತ ಎಂಬ ವಾತಾವರಣ ನಿರ್ಮಾಣವಾಗಿದೆ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಶಿಕ್ಷಕರ ಮತ್ತ ಸರ್ಕಾರದ ಮೇಲಿದೆ. ಸರ್ಕಾರಿ ಶಾಲಾ-ಕಾಲೇಜುಗಳ ಕಟ್ಟಡಗಳ ಸುರಸ್ತಿಗೆ 1,200 ಕೋಟಿ ರೂ ಬಿಡುಗಡೆ ಮಾಡಲಿದೆ ಎಂದು ಹೇಳಿದರು.

ಶಿಕ್ಷಣ ಹಕ್ಕು ಕಾಯ್ದೆ ಕಲ್ಪನೆ ದೋಷಪೂರಿತವಾಗಿದೆ. ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದ್ದರೂ ಕೂಡ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಆರ್ಟಿಇ ಕಾಯ್ದೆಯ ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡುತ್ತಿರುವುದರಿಂದ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದೆ ಎಂದು ಇದೇ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.












Click it and Unblock the Notifications