ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಕ್ಕಳ ಕಳ್ಳರ ವದಂತಿ ನಿಗ್ರಹಕ್ಕೆ ಸಿಎಂ ಎಚ್ಡಿಕೆ ಸೂಚನೆ

By Nayana
|
Google Oneindia Kannada News

ಬೆಂಗಳೂರು, ಮೇ 26: ರಾಜ್ಯದಲ್ಲಿ ಇತ್ತೀಚಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಕಳ್ಳರ ಬಗ್ಗೆ ಹರಿದಾಡುತ್ತಿರುವ ವದಂತಿಗಳಿಂದ ಜನರಲ್ಲಿ ಮೂಡಿರುವ ಆತಂಕವನ್ನು ದೂರ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಆತಂಕದಲ್ಲಿರುವ ಸಾರ್ವಜನಿಕರು ಅಪರಿಚಿತರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಮಾರಣಾಂತಿಕ ಹಲ್ಲೆಗಳನ್ನು ನಡೆಸಿರುವ ಹಲವು ಘಟನೆಗಳು ಈಗಾಗಲೇ ದಾಖಲಾಗಿರುವುದರಿಂದ ಇತರೆ ಕಡೆಗಳಲ್ಲಿ ಸಹ ಇವು ಮರುಕಳಿಸುವ ಅವಕಾಶವಿದೆ. ಹಾಗಾಗಿ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

HDK instructs curb rumors about child theft

ಮಕ್ಕಳ ಕಳ್ಳನೆಂದು ಥಳಿಸಿ ಕೊಂದ ಸ್ಥಳೀಯರು: 9 ಮಂದಿ ಬಂಧನ ಮಕ್ಕಳ ಕಳ್ಳನೆಂದು ಥಳಿಸಿ ಕೊಂದ ಸ್ಥಳೀಯರು: 9 ಮಂದಿ ಬಂಧನ

ನಿಪಾಹ್ ವೈರಸ್: ಕೇರಳದಲ್ಲಿ ಕಾಣಿಸಿಕೊಂಡಿರುವ ನಿಪಾಹ್ ವೈರಸ್ ಹಾಗೂ ಆ ರೋಗದ ಗುಣಲಕ್ಷಣಗಳ ಬಗ್ಗೆ ಎಚ್ಚರಿಕೆ ವಹಿಸಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ರಾಜ್ಯದ ಜನತೆಗೆ ಅರಿವು ಮೂಡಿಸುವತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಹ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

English summary
Chief minister H.D. Kumaraswamy hold a meeting with senior officials and given instructions to curb spreading rumors about child theft in state and precautionary measures on Nipah virus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X