ತಿಂಗಳಿಗೊಮ್ಮೆ ರೈತರ ಮನೆಗೆ ಸರ್ಕಾರ, ಹೇಗಂತೀರಾ?
ಬೆಂಗಳೂರು, ನವೆಂಬರ್ 30: ಪ್ರತಿ ತಿಂಗಳಿಗೊಮ್ಮೆ ಸಂಪುಟ ಸಚಿವರ ಜೊತೆಗೂಡಿ ಗ್ರಾಮ ಭೇಟಿಗೆ ತೆರಳಲು ನಿರ್ಧರಿಸಿದ್ದಾರೆ. ಮೊದಲು ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯವನ್ನು ಮಾಡುತ್ತಿದ್ದರು.
ರೈತರ ಮನೆಯಲ್ಲಿ ರಾಜ್ಯ ಸರ್ಕಾರ ಎನ್ನುವ ಘೋಷಣೆಯಡಿ ಗ್ರಾಮ ಭೇಟಿಗೆ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಶೂನ್ಯ ಬಂಡವಾಳ ಕೃಷಿ ಹಾಗೂ ನೈಸರ್ಗಿಕ ಕೃಷಿ ಯೋಜನೆಯನ್ನು ಯಶಸ್ವಿಗೊಳಿಸಲುರೈತರಿಗೆ ತಿಳಿವಳಿಕೆ ನೀಡುವುದು ಹಾಗೂ ರೈತರ ಹೊಲದಲ್ಲಿಯೇ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಸರ್ಕಾರ ಈ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ತಿಂಗಳು ಒಂದು ಗ್ರಾಮಕ್ಕೆ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಕೃಷಿ ಪಶು ಸಂಗೋಪನೆ, ತೋಟಗಾರಿಕೆ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಶಕ್ತಿ ತುಂಬುವಂತಹ ಕೆಲಸ ಮಾಡಲಾಗುತ್ತದೆ ಎಂದರು.

ಕೃಷಿ ವಲಯದಲ್ಲಿ ಚಟುವಟಿಕೆಗಳಲ್ಲಿ ರೈತರ ಸಹಭಾಗಿತ್ವ ಹೆಚ್ಚಿಸುವ ಉದ್ದೇಶದಿಂದ ರಚಿಸಲಾದ ರೈತರ ಸಲಹಾ ಸಮಿತಿ ಪ್ರತಿ ಜಿಲ್ಲೆಯಿಂದ ಇಬ್ಬರು ಪ್ರಗತಿಪರ ರೈತರನ್ನು ಸದಸ್ಯರನ್ನಾಗಿ ಮಾಡಲಾಗಿದೆ.












Click it and Unblock the Notifications