ನಿಖಿಲ್ ಗೌಡ ಮದುವೆ, ಆರತಕ್ಷತೆ ಎಲ್ಲಿ ನಡೆಯುತ್ತೆ?
ಹಾಸನ, ಜೂ. 12: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಆಸೆಯಂತೆ ಅವರ ಮೊಮ್ಮಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಅವರ ಮದುವೆಯನ್ನು ಹರದನಹಳ್ಳಿಯಲ್ಲೇ ಆಯೋಜಿಸಲಾಗುತ್ತದೆ ಎಂದು ಎಚ್ಡಿಕೆ ಕುಟುಂಬದ ಮೂಲಗಳು ಹೇಳಿವೆ.
'ಜಾಗ್ವಾರ್' ಕನ್ನಡ ಸಿನಿಮಾದ ಮೂಲಕ ನಾಯಕ ನಟ ನಿಖಿಲ್ ಗೌಡ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇನ್ನು ಒಂದು ವರ್ಷ ಸಿನಿಮಾ, ಸುತ್ತಾಟದಲ್ಲೇ ಕಾಲ ಕಳೆಯಲಿದ್ದಾರೆ. [ಚಿರರುಣಿ...ನಿಖಿಲ್ ಬ್ಲಾಗ್, ಗೌಡ್ರ ಪಾಲಿಟಿಕ್ಸ್]
ಮುಂದಿನ ವರ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಿಖಿಲ್ ಹಾಗೂ ಸ್ವಾತಿ ಅವರ ಮದುವೆ ನಡೆಯಲಿದೆ.

ಜನವರಿ 22ರಂದು ನಿಖಿಲ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಂದೇ ಅವರ ಪ್ರಥಮ ಚಿತ್ರ 'ಜಾಗ್ವಾರ್' ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಜನವರಿ ತಿಂಗಳಲ್ಲೇ ನಿಖಿಲ್ ಮದುವೆ ಕೂಡಾ ಆಗಲಿದ್ದಾರೆ.['ಫಿಲ್ಮಿಬೀಟ್ ಕನ್ನಡ' ವಿಶೇಷ; ಎಚ್.ಡಿ.ಕೆ ಪುತ್ರ ನಿಖಿಲ್ ಸಂದರ್ಶನ]
ಹರದನಹಳ್ಳಿಯಲ್ಲಿ ದೇವೇಶ್ವರ ದೇವಾಲಯದ ಉದ್ಘಾಟನಾ ಸಮಾರಂಭಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಆಗಮಿಸಿದ್ದಾಗ ತಮ್ಮ ಮಗನ ಮದುವೆ ಬಗ್ಗೆ ಮಾತನಾಡಿದರು. ಹರದನಹಳ್ಳಿಯಲ್ಲಿ ಮದುವೆ ಶುಭ ಕಾರ್ಯ ನಡೆಸಲು ಕುಟುಂಬದ ಎಲ್ಲರೂ ಇಷ್ಟಪಟ್ಟಿದ್ದಾರೆ. ಅದರಂತೆ ಮುಂದಿನ ವರ್ಷ ಮದುವೆ ನಡೆಸಲಾಗುತ್ತದೆ ಎಂದರು. [ಗಾಸಿಪ್ ಪಂಡಿತರ ಬಾಯಿಗೆ ಬೀಗ ಹಾಕಿದ ನಿಖಿಲ್ ಗೌಡ]
ನಿಖಿಲ್ ಹಾಗೂ ಸ್ವಾತಿ ಅವರ ಮದುವೆ ಹರದನಹಳ್ಳಿಯಲ್ಲಿ ನಡೆಸಿ, ರಾಮನಗರದಲ್ಲಿ ಆರತಕ್ಷತೆ ನಡೆಸಲು ಉದ್ದೇಶಿಸಲಾಗಿದೆ. ಆರತಕ್ಷತೆ ಬೆಂಗಳೂರಿನಲ್ಲೂ ಇಟ್ಟುಕೊಳ್ಳುವ ಸಾಧ್ಯತೆಯೂ ಇದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಹಾಗೂ ಪೂರ್ಣಿಮಾ ಮೋಹನ್ ಅವರ ಪುತ್ರಿ ಸ್ವಾತಿ ಅವರನ್ನು ಪ್ರೀತಿಸಿದ ನಿಖಿಲ್ ಅವರು ಈಗಷ್ಟೇ ಸಿನಿ ಬದುಕು ಆರಂಭಿಸಿದ್ದಾರೆ. ಮುಂದಿನ ವರ್ಷ ಅವರ ಹೊಸ ಬಾಳು ಆರಂಭವಾಗಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications