ಅದು ಸಿ.ಪಿ.ಯೋಗೇಶ್ವರ್ ಅಲ್ಲಾರೀ.. ಸಿ.ಡಿ.ಯೋಗೇಶ್ವರ್
ನವದೆಹಲಿ, ಜುಲೈ 21: ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಸಚಿವರು ಸಿ.ಪಿ.ಯೋಗೇಶ್ವರ್ ಅಲ್ಲ, ಅದು ಸಿ.ಡಿ.ಯೋಗೇಶ್ವರ್. ಅವರ ಬಳಿ ಎಲ್ಲಾ ದಾಖಲೆಯಿದೆ, ಆವಾಗಾವಗ ಎಲ್ಲಾ ದಾಖಲೆಗಳನ್ನು ತೋರಿಸಿಬಿಟ್ಟು, ಕೆಲಸ ಸಾಧಿಸಿಕೊಂಡು ಬರುತ್ತಾರೆ"ಎಂದು ಸಂಸದ ಡಿ.ಕೆ.ಸುರೇಶ್ ಲೇವಡಿ ಮಾಡಿದ್ದಾರೆ.
"ಈಗಿನ ಯಡಿಯೂರಪ್ಪನವರದ್ದು ಸಿಡಿ ಸರಕಾರ ಎಂದು ಹೇಳಬಹುದು. ಮಾನ್ಯ ಪ್ರಧಾನಿಗಳು ಮತ್ತು ಕೇಂದ್ರ ಗೃಹ ಸಚಿವರು ಇದನ್ನು ತನಿಖೆಗೆ ಒಳಪಡಿಸಬೇಕೆಂದು ನಾನು ಭಾವಿಸುತ್ತೇನೆ"ಎಂದು ಸುರೇಶ್ ಅಭಿಪ್ರಾಯ ಪಟ್ಟಿದ್ದಾರೆ.
"ಕಾರಣ ಏನಂದರೆ, ಐನೂರಕ್ಕೂ ಹೆಚ್ಚು ಸಿಡಿಗಳಿವೆ ಎಂದು ವರದಿಯಾಗಿತ್ತು. ಎಲ್ಲರೂ ಸಿಡಿಯನ್ನು ಮುಂದಿಟ್ಟುಕೊಂಡೇ ಅಧಿಕಾರವನ್ನು ಪಡೆಯುತ್ತಿರುವುದು ನಮ್ಮ ರಾಜ್ಯದ ದುರಂತ"ಎಂದು ಡಿ.ಕೆ.ಸುರೇಶ್ ಬೇಸರ ವ್ಯಕ್ತ ಪಡಿಸಿದರು.

"ರಾಜ್ಯದ ಮರ್ಯಾದೆಗೆ ಕಪ್ಪುಚುಕ್ಕೆ ಇಡುವಂತವರನ್ನು ಜನತೆ ಕ್ಷಮಿಸುವುದಿಲ್ಲ. ಇಂತವರು ಯಾವುದೇ ಪಕ್ಷದಲ್ಲಿರಲಿ, ಅವರ ಮೇಲೆ ಮುಂದಿನ ದಿನಗಳಲ್ಲು ಕ್ರಮಗಳನ್ನು ತೆಗೆದುಕೊಳ್ಳಬೇಕು"ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದ್ದಾರೆ.
"ಪ್ರಜಾಪ್ರಭುತ್ವ ವ್ಯವಸ್ಥೆಗೆ ಮರ್ಯಾದೆ ಕೊಡುವ ನಿಟ್ಟಿನಲ್ಲಿ ಇಂತಹ ನಾಯಕರುಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕಿದೆ. ಇಂತಹ ಮನಸ್ಥಿತಿಯವರು ಯಾವುದೇ ಪಕ್ಷದಲ್ಲಿದ್ದರೂ, ಅವರು ಕಂಟಕವೇ"ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.
ನಾಯಕತ್ವ ಬದಲಾವಣೆಯ ವಿಚಾರ, ರಾಜ್ಯದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿದೆ. ಜುಲೈ 26ಕ್ಕೆ ಆಯೋಜಿಸಲಾಗಿದ್ದ ಬಿಜೆಪಿ ಶಾಸಕರ ಸಭೆಯನ್ನು ರದ್ದು ಪಡಿಸಲಾಗಿದೆ. ಈ ನಡುವೆ, ಸಚಿವ ಶ್ರೀರಾಮುಲು, ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ದೌಡಾಯಿಸಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications