ನನ್ನ ಹೆಸರನ್ನೇ ಚೇಂಜ್ ಮಾಡ್ಕೊಂಡು ಬಿಡ್ತೀನಿ: ಶಿವಣ್ಣ ಓಪನ್ ಚಾಲೆಂಜ್
ಶಿವಮೊಗ್ಗ, ಮಾರ್ಚ್ 26: ರಾಜಾಹುಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಭದ್ರಕೋಟೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದು, ನಟ ಶಿವರಾಜ್ಕುಮಾರ್ ಅವರು ಶಿವಮೊಗ್ಗದಲ್ಲಿ ಪತ್ನಿ ಗೀತಾ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಹೌದು, ಶಿವಮೊಗ್ಗ ಲೋಕಸಭಾ ಕ್ಷೇತ್ರ ಟಿಕೆಟ್ ಘೋಷಣೆಯಾದ ದಿನದಿಂದಲೂ ಪತ್ನಿ ಪರವಾಗಿ ನಟ ಶಿವರಾಜ್ ಕುಮಾರ್ ನಿರಂತರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ನಟ ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದು, ಪತ್ನಿ ಗೀತಾ ಗೆದ್ದರೆ ಜನರ ಪರವಾಗಿ ಅವರು ಕೆಲಸ ಮಾಡುತ್ತಾರೆ ಎನ್ನುವ ಭರವಸೆ ನೀಡಿದ್ದಾರೆ.

ಗಂಡನಾಗಿ ನಾನು ನನ್ನ ಕರ್ತವ್ಯವನ್ನ ನಿರ್ವಹಿಸುತ್ತಿದ್ದೇನೆ. ಒಂದು ಅವಕಾಶ ಕೊಟ್ಟು ನೋಡಿ , ನಾವು ಕೊಟ್ಟ ಮಾತನ್ನ ತಪ್ಪುವುದಿಲ್ಲ, ನಾವು ಜನರಿಂದ ಜನರಿಗಾಗಿ ಬದುಕಬೇಕು, ಸೇವೆಗಾಗಿ ಅವರು ಈಗಾಗಲೇ ಶಕ್ತಿಧಾಮವನ್ನ ನಡೆಸುತ್ತಿದ್ದಾರೆ. ಅಧಿಕಾರ ಬಂದ್ರೆ ಇನ್ನೂ ಪವರ್ ಫುಲ್ ಆಗಿ ಕೆಲಸ ಮಾಡಬಹುದು, ಆ ಪವರ್ ಫುಲ್ ಆಗಿ ಕೆಲಸ ಮಾಡಲು ನೀವು ಆಯ್ಕೆ ಮಾಡಬೇಕು ಎಂದು ಶಿವಣ್ಣ ಹೇಳಿದ್ದಾರೆ.
ಗೀತಾಗೆ ಒಮ್ಮೆ ಅವಕಾಶ ಕೊಟ್ಟುನೋಡಿ. ಅವರು ಜನರ ಪರವಾಗಿ ಕೆಲಸ ಮಾಡ್ತಾರೆ. ಆ ಬಳಿಕವೂ ಅವರು ಸರಿಯಾದ ಅಭ್ಯರ್ಥಿನ ಆಯ್ಕೆ ಮಾಡಿಲ್ಲ ಎಂದರೇ ನಾನು ನನ್ನ ಹೆಸರು ಚೇಂಜ್ ಮಾಡ್ಕೋತೀನಿ. ಮಾತು ಕೊಟ್ಟಮೇಲೆ ಅದನ್ನು ಫಾಲೋ ಮಾಡ್ತೀವಿ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications