ಹೆಡ್ಬುಷ್ ವಿವಾದಕ್ಕೆ ರಾಜಕೀಯ ಬಣ್ಣ: ಸಚಿವ ಸುನೀಲ್ ಕುಮಾರ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು, ಅಕ್ಟೋಬರ್ 28: ಭೂಗತ ಲೋಕದ ಘಟನೆಗಳನ್ನು ಹೊಂದಿರುವ, ಡಾಲಿ ಧನಂಜಯ್ ನಟನೆಯ ಹೆಡ್ಬುಷ್ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಆರೋಪಿಸಿಲಾಗಿದೆ. ಹಿಂದೂ ಸಂಘಟನೆಗಳು ಧನಂಜಯ ವಿರುದ್ಧ ಸಂಘರ್ಷಕ್ಕೆ ಮುಂದಾಗಿದ್ದವು. ಧನಂಜಯ್ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿತ್ತು.
ಈ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, 'ಹೆಡ್ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕೃತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ' ಎಂದು ತಿಳಿಸಿದ್ದಾರೆ.
'ಒಂದೊಮ್ಮೆ ಹೆಡ್ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ' ಎಂದು ಟ್ವೀಟ್ ಮಾಡಿದ್ದಾರೆ.

ಸಚಿವರ ವಿರುದ್ಧ ಕಾಂಗ್ರೆಸ್ ಆಕ್ರೋಶ
ಹೆಡ್ಬುಷ್ ಕುರಿತು ಟ್ವೀಟ್ ಮಾಡಿರುವ ಸಚಿವ ಸುನೀಲ್ ಕುಮಾರ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಹೆಡ್ಬುಷ್ ಚಿತ್ರದಲ್ಲಿ ಇಲ್ಲದ ವಿವಾದ ಕಣ್ಣಿಗೆ ಬೀಳುತ್ತಲೇ ಹೆಡೆ ಎತ್ತಿ ಬುಸ್ ಬುಸ್ ಎನ್ನಲು ಹೊರಟಿರುವ ಸುನೀಲ್ ಕುಮಾರ್ ಅವರೇ, ಪಠ್ಯಪುಸ್ತಕದಲ್ಲಿ, ಗಣರಾಜ್ಯೋತ್ಸವ ಪರೇಡ್ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ನಿಮ್ಮೊಳಗಿನ ಸಂಸ್ಕೃತಿ ವೀರ ಹೆಡೆ ಎತ್ತಲಿಲ್ಲವೇಕೆ' ಎಂದು ಪ್ರಶ್ನಿಸಿದೆ.

'ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸಚಿವ ಸುನೀಲ್ ಕುಮಾರ್ ಅವರು ಇಲ್ಲದ ವಿವಾದ ಸೃಷ್ಟಿಸಿ ಮೈಲೇಜ್ ಪಡೆಯಲು ಹೊರಟಿದ್ದಾರೆ. ಪಠ್ಯದಲ್ಲಿ ಸುರಪುರದ ವೀರರಿಗೆ ಅವಮಾನವಾದಾಗ ಎಲ್ಲಿ ಹೋಗಿದ್ದರು? ತಮ್ಮ ಇಂಧನ ಇಲಾಖೆಯ ಅಕ್ರಮಗಳನ್ನು ತಡೆಯಲು, ಅವ್ಯವಸ್ಥೆ ನಿವಾರಿಸಲು ಆಸಕ್ತಿ ಇಲ್ಲವೇಕೆ? ವಿವಾದಗಳಿಗೆ ಮಾತ್ರ ಇವರ ಆಸಕ್ತಿಯೇ' ಎಂದು ಕೆಪಿಸಿಸಿ ಕೇಳಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications