ಕೊರೋನಾ ಸಾವು ಹಿನ್ನೆಲೆ; ಕಲಬುರಗಿಯಲ್ಲಿ ಶ್ರೀರಾಮುಲು ಮಹತ್ವದ ಸಭೆ
ಬೆಂಗಳೂರು, ಮಾ. 14: ಕೊರೊನಾ ವೈರಸ್ಗೆ ದೇಶದಲ್ಲೆ ಮೊದಲ ಬಲಿಯಾಗಿದ್ದ ಕಲಬುರಗಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಹತ್ವದ ಸಭೆ ಕರೆದಿದ್ದಾರೆ. ಇಂದು ಸಂಜೆ 7ಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಣಿನ ಸಭೆಗಳು ನಡೆಯಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.
ಕೊರೊನಾ ವೈರಸ್ ಕುರಿತಾಗಿ ಪರಿಶೀಲನಾ ಸಭೆ ನಡೆಯಲಿದ್ದು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ಶ್ರೀರಾಮುಲು ಅವರು ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಅಧಿಕಾರಿಗಳನ್ನು ಹೊರತು ಪಡಿಸಿ ಬೇರೆಯವರನ್ನು ಭೇಟಿ ಮಾಡುವುದಿಲ್ಲ: ಕೋವಿಡ್ 19 ಕುರಿತಾದ ಸರಣಿ ಸಭೆಗಳು ಇರುವುದರಿಂದ ಅಧಿಕಾರಿಗಳನ್ನು ಹೊರತು ಪಡಿಸಿ ಬೇರೆ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ.
ಇದು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳ ಸಲಹೆ ಮೇರೆಗೆ ಕೈಗೊಂಡಿರುವ ತೀರ್ಮಾನ. ಇದಕ್ಕಾಗಿ ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ. ಪಕ್ಷದ ಕಾರ್ಯಕರ್ತರು ಭೇಟಿ ಮಾಡಲು ಬರಬಾರದು ಎಂದು ಶ್ರೀರಾಮುಲು ಅವರು ಮನವಿ ಮಾಡಿಕೊಂಡಿದ್ದಾರೆ.