ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೋನಾ ಸಾವು ಹಿನ್ನೆಲೆ; ಕಲಬುರಗಿಯಲ್ಲಿ ಶ್ರೀರಾಮುಲು ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಮಾ. 14: ಕೊರೊನಾ ವೈರಸ್‌ಗೆ ದೇಶದಲ್ಲೆ ಮೊದಲ ಬಲಿಯಾಗಿದ್ದ ಕಲಬುರಗಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಹತ್ವದ ಸಭೆ ಕರೆದಿದ್ದಾರೆ. ಇಂದು ಸಂಜೆ 7ಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಣಿನ ಸಭೆಗಳು ನಡೆಯಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್‌ ಕುರಿತಾಗಿ ಪರಿಶೀಲನಾ ಸಭೆ ನಡೆಯಲಿದ್ದು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ಶ್ರೀರಾಮುಲು ಅವರು ಕಲಬುರಗಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

Health Minister Sriramulu will hold an important meeting in Kalaburgi regarding COVID 19

ಅಧಿಕಾರಿಗಳನ್ನು ಹೊರತು ಪಡಿಸಿ ಬೇರೆಯವರನ್ನು ಭೇಟಿ ಮಾಡುವುದಿಲ್ಲ: ಕೋವಿಡ್ 19 ಕುರಿತಾದ ಸರಣಿ ಸಭೆಗಳು ಇರುವುದರಿಂದ ಅಧಿಕಾರಿಗಳನ್ನು ಹೊರತು ಪಡಿಸಿ ಬೇರೆ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ.

Health Minister Sriramulu will hold an important meeting in Kalaburgi regarding COVID 19

ಇದು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳ ಸಲಹೆ ಮೇರೆಗೆ ಕೈಗೊಂಡಿರುವ ತೀರ್ಮಾನ. ಇದಕ್ಕಾಗಿ ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ. ಪಕ್ಷದ ಕಾರ್ಯಕರ್ತರು ಭೇಟಿ ಮಾಡಲು ಬರಬಾರದು ಎಂದು ಶ್ರೀರಾಮುಲು ಅವರು ಮನವಿ ಮಾಡಿಕೊಂಡಿದ್ದಾರೆ.

English summary
Health Minister Sriramulu will hold an important meeting in Kalaburgi, as a person has died of coronavirus. Appealed not to meet with party workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X