ರಣಬಿಸಿಲಿಗೆ ಸುಡುತ್ತಿದೆ ಕರ್ನಾಟಕ: 2 ದಿನದಲ್ಲಿ ಮಳೆ
ಬೆಂಗಳೂರು, ಮೇ 26: ರಾಜ್ಯದಲ್ಲೂ ಬಿಸಿಲಿನ ಧಗೆ ತನ್ನ ಪ್ರತಾಪ ಮುಂದುವರಿಸಿದೆ. ಹೈದ್ರಾಬಾದ್ ಕರ್ನಾಟಕ ಭಾಗವಲ್ಲದೇ ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳೂ ಬಿಸಿಯಾಗಿವೆ.
ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಳೆದ 3-4 ದಿನಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಸರಾಸರಿ 42 ರಿಂದ 46 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ 38 ರಿಂದ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.[ರಾಜ್ಯಕ್ಕೆ ಮಾನ್ಸೂನ್ ಪ್ರವೇಶ ಕೊಂಚ ವಿಳಂಬ]

ಹೈದ್ರಾಬಾದ್ ಕರ್ನಾಟಕದ ಹಲವು ಭಾಗದಲ್ಲಿ ಬಿಸಿಲಿನ ವೇಳೆ ಅಘೋಷಿತ ಬಂದ್ ನಿರ್ಮಾಣವಾಗುತ್ತಿದೆ. ಕುಡಿಯುವ ನೀರಿಗೆ ಸಮಸ್ಯೆ ಕಂಡುಬರುತ್ತಿದ್ದು ಜನ ದ್ರವಾಹಾರಕ್ಕೆ ಮೊರೆ ಹೋಗುತ್ತಿದ್ದಾರೆ.
ಮೇ 27 ರಿಂದ ಮಳೆ ಆರಂಭವಾಗುವ ನಿರೀಕ್ಷೆ ಇದ್ದು ಮೂರು ದಿಗಳ ಕಾಲ ಮುಂದುವರಿಯಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.[ದೇಶದ ಮಾನ್ಸೂನ್ ಮೇಲೆ 'ಎಲ್ ನಿನೋ' ಕರಾಳ ಛಾಯೆ]
ಬೆಂಗಳೂರಿನಲ್ಲಿ ಸೋಮವಾರ 33 ಡಿಗ್ರಿ ಸೆಲ್ಸಿಯಸ್ ಉಷ್ಠಾಂಶ ದಾಖಲಾಗಿತ್ತು. ಬೆಂಗಳೂರಿನಲ್ಲಿ ಬಿಸಿಲಿನ ತಾಪ ಕೊಂಚ ಕಡಿಮೆ ಇದೆ ಎಂದೇ ಹೇಳಬಹುದು. ಆಗಾಗ ಸುರಿಯುತ್ತಿರುವ ಮಳೆ ತಾಪ ಏರಿಕೆಯಾಗದಿರಲು ಕಾರಣವಾಗಿದೆ.
* ಬಿಸಿಲಿನ ತಾಪ
ಬೀದರ್- 42.2 ಡಿಗ್ರಿ ಸೆ.
ಕಲಬುರಗಿ- 42 ಡಿಗ್ರಿ ಸೆ.
ಬಾಗಲಕೋಟೆ- 40 ಡಿಗ್ರಿ ಸೆ.
ಧಾರವಾಡ- 38 ಡಿಗ್ರಿ ಸೆ.
ಗದಗ - 38 ಡಿಗ್ರಿ ಸೆ.
ಶಿವಮೊಗ್ಗ- 38 ಡಿಗ್ರಿ ಸೆ.
ಮಂಗಳೂರು -34 ಡಿಗ್ರಿ ಸೆ.
ಹಾವೇರಿ-34 ಡಿಗ್ರಿ ಸೆ.
ಮೈಸೂರು-32 ಡಿಗ್ರಿ ಸೆ. [ಬಿಸಿಲಿನ ಹೊಡೆತಕ್ಕೆ 600ಕ್ಕೂ ಅಧಿಕ ಮಂದಿ ಬಲಿ]
ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಸಿಲಿನ ಝಳಕ್ಕೆ ಮತ್ತೆ 700 ಮಂದಿ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಭಾನುವಾರ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ಐದು ವರ್ಷಗಳ ಅವಧಿಯಲ್ಲಿ ಹೆಚ್ಚಿನ ಉಷ್ಣಾಂಶ ದಾಖಲಾಗಿತ್ತು. ಲಖನೌದಲ್ಲಿ 44.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಒಡಿಶಾದ 9 ನಗರಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications