ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿಗಳಿಂದ ತಹಸೀಲ್ದಾರಿಗೆ ವಿಶೇಷ ಸೂಚನೆ
ಬೆಂಗಳೂರು, ಏಪ್ರಿಲ್. 10: ಅತೀ ಹೆಚ್ಚು ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಾರೋಗ್ಯ ತಡೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳತ್ತ ಕೂಡಲೇ ಗಮನ ಹರಿಸಬೇಕು ಎಂದು ಎಲ್ಲಾ ತಾಲೂಕಿನ ತಹಸಿಲ್ದಾರರಿಗೆ ವಿಶೇಷ ಸೂಚನೆ ನೀಡಲಾಗಿದೆ.
ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದಂತೆ ಐಎಮ್ಡಿ ಮತ್ತು ಕೆಎಸ್ಎನ್ಡಿಎಂಸಿಯಿಂದ ನೀಡಿದ ಮುನ್ಸೂಚನೆ ಎಚ್ಚರಿಕೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಐಇಸಿ ಚಟುವಟಿಕೆಗಳನ್ನು ಜಾರಿಗೆ ತರಬೇಕು.

ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಬಸ್ ಟರ್ಮಿನಲ್ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸಬೇಕು.
ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆ ನೀಡುವ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಪ್ರಚಾರ ಮಾಡಬೇಕು.

ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಂಡು ನೀರಿನ ಲಭ್ಯತೆಗೆ ಏರ್ಪಾಡು ಮಾಡಬೇಕು. ಸಾಮೂಹಿಕ ಸಭೆಗಳು ನಡೆಯುವ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು.
ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು. ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು. ಸಾಕಷ್ಟು ಓಆರ್ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್ ಏರ್ ಕೂಲರ್ಗಳು ಇರಬೇಕು.
ಸಾಧ್ಯವಾದಷ್ಟು ಮಟ್ಟಿಗೆ ಸಭೆ ಸಮಾರಂಭಗಳನ್ನು ಬೆಳಗ್ಗೆ ಅಥವಾ ಸಂಜೆಯ ತಂಪಾದ ವಾತಾವರಣವಿರುವ ಅವಧಿಯಲ್ಲಿ ನಿಗದಿಪಡಿಸಬೇಕು ಎಂಬುದರ ಬಗ್ಗೆ ಕೂಡಲೇ ಅಗತ್ಯ ಕ್ರಮ ವಹಿಸಬೇಕು ಎಂದು ಎಲ್ಲಾ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿಗಳು ವಿಶೇಷ ಸೂಚನೆ ನೀಡಿದ್ದಾರೆ.
ಇದರ ಜೊತೆಗೆ ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು. ಹೋಟೆಲ್ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸಬೇಕು ಮತ್ತು ಹೋಟೆಲ್ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್ ಮತ್ತು ಅಂಗಡಿಗಳ ತಪಾಸಣೆ ನಡೆಸಿ ಆಹಾರ ಮತ್ತು ನೀರಿನ ಗುಣಮಟ್ಟದ ಸುರಕ್ಷತೆಯ ಬಗ್ಗೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಬಾಳೆಹಣ್ಣು ತಿನ್ನುವ ಸರಿಯಾದ ಕ್ರಮ ಯಾವುದು? ಈ ಸಣ್ಣ ತಪ್ಪು ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications