Karnataka Rains : ಹವಾಮಾನ ವೈಪರೀತ್ಯ: ಕರ್ನಾಟಕದಾದ್ಯಂತ 3 ದಿನ ಮಳೆ ಸಾಧ್ಯತೆ
ಬೆಂಗಳೂರು, ನವೆಂಬರ್ 22: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವಾತಾವರಣ ಮುಂದುವರೆದ ಪರಿಣಾಮ ಕರ್ನಾಟಕ ಬಹುತೇಕ ಪ್ರದೇಶಗಳಲ್ಲಿ ಮುಂದಿನ ಮೂರು ಮಳೆ (ನ. 25ವರೆಗೆ) ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಎರಡು ವಾರದಿಂದ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತದಂತಹ ವೈಪರೀತ್ಯಗಳು ಉಂಟಾಗುತ್ತಲೇ ಇವೆ. ಇದರ ಪರಿಣಾಮವಾಗಿ ತಮಿಳುನಾಡು, ಚೆನ್ನೈ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದಲ್ಲೂ ಮಳೆಯ ವಾತಾವರಣ ಕಂಡು ಬಂದಿದೆ. ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೇವಾಂಶ ಭರಿತ ಗಾಳಿ ಬೀಸತೊಡಗಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರದಿಂದ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ವ್ಯಾಪಕ ಮಳೆ ಜತೆಗೆ ತುಂತುರು ಮಳೆ ಆಗಲಿದೆ
ಹವಾಮಾನ ಇಲಾಖೆ ಗುರುತಿಸಿದ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗಲಿದೆ, ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಾಗ ಹಗುರ ಇಲ್ಲವೇ ತುಂತುರು ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದರ ಹೊರತು ಕರ್ನಾಟಕದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಈ ಹಿಂದಿನ 24 ಗಂಟೆಗಳಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ 2 ಸೆಂಟಿ ಮೀಟರ್, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಮತ್ತು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ತಲಾ 1ಸೆಂಟಿ ಮೀಟರ್ ಮಳೆ ಬಿದ್ದಿದ್ದು, ಹಲವೆಡೆ ತುಂತುರು ಮಳೆ ದಾಖಲಾಗಿದೆ. ರಾಜ್ಯದ ಗರಿಷ್ಠ ತಾಪಮಾನ ಕಾರವಾರ ಹಾಗೂ ಗೋಕರ್ಣದಲ್ಲಿ 34.6ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ತಾಪಮಾನ 14.3ಡಿಗ್ರಿ ಸೆಲ್ಸಿಯಸ್ ಮಡಿಕೇರಿಯಲ್ಲಿ ಕಂಡು ಬಂದಿದೆ.

ಕೆಲವು ರಾಜ್ಯಗಳಲ್ಲಿ ಮಾತ್ರ ಮಳೆ ವಾತಾವರಣ
ಅಕ್ಟೋಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಪ್ರವೇಶಿಸಿ, ಆರಂಭದಲ್ಲಿ ದೇಶದ ಅನೇಕ ಕಡೆಗಳಲ್ಲಿ ಅಬ್ಬರಿಸಿತ್ತು. ಆಗ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಷ್ಟಾಗಿ ಹಿಂಗಾರಿನ ಪ್ರಭಾವ ಉಂಟಾಗಿರಲಿಲ್ಲ. ಸ್ವಲ್ಪ ದಿನಗಳ ಬಳಿಕ ದೇಶಾದ್ಯಂತ ಹಿಂಗಾರು ಆವರಿಸಿತು. ಆಗ ಕರ್ನಾಟಕ, ತೆಲಂಗಾಣ, ತಮಿಳುನಾಡು, ಇನ್ನಿತರ ಭಾಗದಲ್ಲಿ ಮಳೆ ಅಬ್ಬರವಿತ್ತು. ಆದರೆ ಈಗ ಕರಾವಳಿ ರಾಜ್ಯಗಳನ್ನು ಹೊರತು ಪಡಿಸಿ ಉಳಿದೆಡೆ ಮಳೆ ದುರ್ಬಲವಾಗಿದೆ.
ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕ, ಒಡಿಶಾ, ಆಂಧ್ರ ಪ್ರದೇಶದ ಹಲವು ಜಿಲ್ಲೆಗಳು, ತೆಲಂಗಾಣ, ರಾಯಲಸೀಮಾ, ಪುದುಚೇರಿ, ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪಗಳಲ್ಲಿ ಆಗಾಗ ಜೋರು ಮಳೆ ಬೀಳುವ ಸಾಧ್ಯತೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ











Click it and Unblock the Notifications