ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಅಕ್ಟೋಬರ್ 14 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ಜಿಲ್ಲೆಗಳಲ್ಲಿ ಮಂಗಳವಾರ 'ಯೆಲ್ಲೊ' ಅಲರ್ಟ್ ಘೋಷಣೆ ಮಾಡಲಾಗಿದೆ.
Recommended Video
ಕರಾವಳಿ ಭಾಗದಲ್ಲಿ ನೈಋತ್ಯ ಮಾರುತಗಳು ವೇಗವಾಗಿ ಬೀಸುತ್ತಿವೆ. ಅಕ್ಟೋಬರ್ 15 ಮತ್ತು 16ರಂದು ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಸಾಗರ, ಕೊಲ್ಲೂರು, ಭಟ್ಕಳ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಮಳೆಯಾಗಿದೆ. ಗುಡುಗು, ಸಿಡಿಲಿನ ಆರ್ಭಟ ನೋಡಿ ಜನರು ಕೆಲಕಾಲ ಆತಂಕಗೊಂಡಿದ್ದರು.
ಭಾನುವಾರ ಹೊನ್ನಾವರಲ್ಲಿ 6, ಭಟ್ಕಳ ಮತ್ತು ತೀರ್ಥಹಳ್ಳಿಯಲ್ಲಿ 4, ಸುಬ್ರಮಣ್ಯ, ಕೊಲ್ಲೂರು ಮತ್ತು ಸಾಗರದಲ್ಲಿ 3 ಸೆಂ. ಮೀ. ಮಳೆಯಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಈ ಬಾರಿ ಅಧಿಕ ಮಳೆಯಾಗಿದ್ದು ಅಡಿಕೆ ಬೆಳೆಗೆ ಕೊಳೆ ರೋಗ ಬಂದಿದೆ. ಬೆಳೆ ನೆಲಕ್ಕೆ ಬರುತ್ತಿದ್ದು, ರೈತರು ಆತಂಕಗೊಂಡಿದ್ದಾರೆ. ಆದರೆ, ಮಳೆ ಕಡಿಮೆಯಾಗದಿರುವುದು ರೈತರನ್ನು ಚಿಂತೆಗೆ ತಳ್ಳಿದೆ.
ಬಳ್ಳಾರಿ ಜಿಲ್ಲೆಯಲ್ಲಿಯೂ ಸತತ ಎರಡು ವಾರಗಳಿಂದ ಮಳೆಯಾಗುತ್ತಿದೆ. ಹೊಸಪೇಟೆ ತಾಲೂಕಿನ ಹಂಪಿ ರಥಬೀದಿಯ ಮಗ್ಗುಲಲ್ಲಿರುವ ಸಾಲು ಮಂಟಪದ ಒಂದು ಭಾಗ ಭಾನುವಾರ ಕುಸಿದು ಬಿದ್ದಿದೆ.
ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಯೂ ಶನಿವಾರ ರಾತ್ರಿ, ಭಾನುವಾರ ಬೆಳಗ್ಗೆ ಮಳೆಯಾಗಿದೆ. ಬೈಲಹೊಂಗಲ, ಸವದತ್ತಿ, ಖಾನಾಪುರ ಮುಂತಾದ ಕಡೆ ಮಳೆಯಾಗಿದೆ. ಸವದತ್ತಿ ತಾಲೂಕಿನ ಬಳಿ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದೆ.
ಸವದತ್ತಿ-ಧಾರವಾಡ ಮಾರ್ಗದ ಮುಖ್ಯ ಸೇತುವೆ ಆಗಸ್ಟ್ನಲ್ಲಿ ಸುರಿದ ಮಳೆಗೆ ಕೊಚ್ಚಿ ಹೋಗಿತ್ತು. ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಸಹ ಈಗಿನ ಮಳೆಗೆ ಕೊಚ್ಚಿ ಹೋಗಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications