ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲೆನಾಡನ್ನು ಬಿಡದ ಮಳೆ, ಹಳ್ಳಕ್ಕೆ ಬಿದ್ದು ಮೃತಪಟ್ಟ ಮಹಿಳೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 11: ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿಯಾಗಿದೆ. ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆ ಸುಶೀಲಾ ಎಂದು ಗುರುತಿಸಲಾಗಿದೆ. ಜಮೀನು ಕೆಲಸಕ್ಕೆ ತೆರಳುವಾಗ ಘಟನೆ ಸಂಭವಿಸಿದೆ.

ಜಮೀನಿನ ಪಕ್ಕದ ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು, ಸುಶೀಲಾ ಸಾವನ್ನಪ್ಪಿದ ಪ್ರಕರಣ ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ದೇವಾಲೆಕೊಪ್ಪ ಮಳಲಿ ಗ್ರಾಮದಲ್ಲಿ ಸಂಭವಿಸಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಪಿಲೆಯ ರೌದ್ರತೆಗೆ ಮುಳುಗಿದ ಸುತ್ತೂರು ಸೇತುವೆ , ಸಂಪರ್ಕ ಕಡಿತಕಪಿಲೆಯ ರೌದ್ರತೆಗೆ ಮುಳುಗಿದ ಸುತ್ತೂರು ಸೇತುವೆ , ಸಂಪರ್ಕ ಕಡಿತ

ಇನ್ನು ಶೃಂಗೇರಿ ತಾಲೂಕಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಕಾಫಿ ಹಾಗೂ ಅಡಿಕೆ ಬೆಳೆಗೆ ಕೊಳೆ ರೋಗ ಬರುವ ಭೀತಿಯಲ್ಲಿ ರೈತರಿದ್ದಾರೆ. ಶೃಂಗೇರಿಯ ನರಸಿಂಹವನದಲ್ಲಿ ಇರುವ ಶ್ರೀಮಠದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ರೈತರು, ಈ ಮಳೆ ಕಡಿಮೆ ಆಗುವಂತೆ ದೇವರಿಗೆ ಪ್ರಾರ್ಥನೆ ಸಲ್ಲಿಸುವಂತೆ ಕೇಳಿಕೊಂಡಿದ್ದಾರೆ.

Heavy rain continued in Chikkamagalur district, woman died

ಸ್ವಾಮೀಜಿಗಳಿಗೆ ಅರಿಕೆ ಮಾಡಿಕೊಂಡರೆ ಮಳೆ ಕಡಿಮೆ ಆಗುತ್ತದೆ ಎಂಬ ನಂಬಿಕೆ ಇರುವ ಹಿನ್ನೆಲೆಯಲ್ಲಿ ರೈತರು ಮನವಿ ಮಾಡಿದ್ದಾರೆ.

English summary
Heavy rain continued in Malnad region- Chikkamagalur district. Woman died and farmers panic about crop loss.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X