ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಸೆ.21: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಕರ್ನಾಟಕ ಭಾಗಗಳಲ್ಲಿ ಸೆ.23ರವರೆಗೂ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಲಭ್ಯವಾಗಿದೆ.

ಕೊಡಗಿನ ಕಾಫಿಗೆ ನಷ್ಟ ಉಂಟಾಗಿದ್ದು ಬರೋಬ್ಬರಿ 386 ಕೋಟಿ ಕೊಡಗಿನ ಕಾಫಿಗೆ ನಷ್ಟ ಉಂಟಾಗಿದ್ದು ಬರೋಬ್ಬರಿ 386 ಕೋಟಿ

ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಬೆಳಗಾವಿ, ಹಾವೇರಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬತ್ತುತ್ತಿವೆ ನದಿಗಳು, ಪ್ರವಾಹದ ಹೊಸ ಸಂಕಷ್ಟದಲ್ಲಿ ಕೇರಳ ಬತ್ತುತ್ತಿವೆ ನದಿಗಳು, ಪ್ರವಾಹದ ಹೊಸ ಸಂಕಷ್ಟದಲ್ಲಿ ಕೇರಳ

ಗುರುವಾರ ಸಂಜೆಯಿಂದಲೇ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ, ವಿಜಯಪುರ, ಗದಗ, ವಿಜಯಪುರ, ಮುದ್ದೇಬಿಹಾಳ, ಸೇಡಂ, ಚಿತ್ತಾಪುರ, ಸಂಡೂರು ಭಾಗಗಳಲ್ಲಿ ಮಳೆಯಾಗಿದೆ.

ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

Heavy rain forecast in North Karnataka for three days

ಶುಕ್ರವಾರದಿಂದ ಮಳೆ ಜೋರಾಗುವ ಸಾಧ್ಯತೆ ಇದೆ, ಮುಂಗಾರು ಆರಂಭದಿಂದಲೂ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಬಂದಿದ್ದು, ಉತ್ತರ ಒಳನಾಡಿನ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ, ಮುಂಗಾರು ಅಂತ್ಯಗೊಳ್ಳುವ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಆರಂಭವಾಗಿದೆ.ಅಕ್ಟೋಬರ್ ನಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

English summary
Meteorological department has given forecast that heavy rain expected in north Karnataka district as depression occurred in Bay of Bengal and monsoon sharpening in various states of south India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X