Karnataka Rain: ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ: ಹೊತ್ತಿ ಉರಿದ ತೆಂಗಿನ ಮರ
ಧಾರವಾಡ, ಏಪ್ರಿಲ್ 18: ಬಿಸಿಲಿನಿಂದ ಬಸವಳಿದ ಕರ್ನಾಟಕದ ಜನರಿಗೆ ವರುಣ ದೇವ ಕೃಪೆ ತೋರಿದ್ದು, ಧಾರವಾಡ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದರೆ, ಇನ್ನೂ ಕೆಲವು ಭಾಗಗಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ.
ಧಾರವಾಡ ನಗರದಲ್ಲಿ ಮಧ್ಯಾಹ್ನ ಆಲಿಕಲ್ಲು, ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಕಲಘಟಗಿ ತಾಲೂಕಿನ ದ್ಯಾವನಕೊಂಡ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಸಿಕ್ಕಿ ತೆಂಗಿನ ಮರ ಹೊತ್ತಿ ಉರಿದಿದೆ. ಮನೆಯೊಂದರ ಮುಂದಿನ ತೆಂಗಿನ ಮರ ಕಣ್ಣೆದುರೆ ಸುಟ್ಟು ಹೋಗಿದೆ. ಇನ್ನು ಧಾರವಾಡ ಸಂಗೊಳ್ಳಿ ರಾಯಣ್ಣ ನಗರದ ವಿವಿಧೆಡೆ ಆಲಿಕಲ್ಲುಗಳು ಧರೆಗುರುಳಿದ್ದು, ಭೂಮಿ ತಂಪಾಗಿದೆ.

ಕಲಘಟಗಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಕುಂದಗೋಳ ಪಟ್ಟಣ ಹಾಗೂ ಅಲ್ಲಾಪುರ, ತರ್ಲಘಟ್ಟ, ಕಮಡೊಳ್ಳಿ, ಯರಿನಾರಾಯಣಪುರ, ಚಾಕಲಬ್ಬಿ, ಶಿರೂರು, ದೇವನೂರು ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ಕಳೆದ ಒಂದು ತಿಂಗಳಿಂದ ಗರಿಷ್ಠ ತಾಪಮಾನ ಹೊಂದಿದ ನವಲಗುಂದ ತಾಲೂಕು ಗುಡುಗು ಮಿಂಚು ಸಹಿತ ಮಳೆ ಸುರಿದು ಪಟ್ಟಣ ತಂಪಾಗಿಸಿದೆ. ಮಳೆಯ ಪರಿಣಾಮ ಚಿಕ್ಕನರ್ತಿ, ಹಿರೇನರ್ತಿ, ಯರಗುಪ್ಪಿ, ಗುಡೇಣಕಟ್ಟಿ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ.
ಗುರುವಾರ ಮಧ್ಯಾಹ್ನ 4 ಘಂಟೆ ಸುಮಾರಿಗೆ ಪ್ರಾರಂಭವಾದ ಮಳೆ ಸಂಜೆ 7 ಗಂಟೆಗೆ ರಭಸವನ್ನು ಪಡೆಯಿತು. ಸುಮಾರು ಮೂರು ಗಂಟೆಗಳ ಕಾಲ ಮಳೆಯಾಗಿದ್ದು, ಮಳೆಯ ನಿರೀಕ್ಷೆಯಲ್ಲಿದ್ದ ಧಾರವಾಡ ಜನತೆ ಹಾಗೂ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಮಂಡ್ಯ ನಗರದ ಮಳವಳ್ಳಿ ತಾಲೂಕಿನ ಕೆಲವೆಡೆ 20 ನಿಮಿಷ ಮಳೆ ಸುರಿದಿದೆ. ಬಿಸಿಲಿಗೆ ಬೇಸತ್ತಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಮೊದಲ ಮಳೆಯಿಂದ ಸಕ್ಕರೆ ನಾಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಬಳ್ಳಾರಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ಜಿಲ್ಲೆಯ ಸಂಡೂರು, ತೋರಣಗಲ್ಲು ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ತೋರಣಗಲ್ಲಿನಲ್ಲಿ ಗುಡುಗು ಸಮೇತ ಮಳೆಯಾಗಿದೆ.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ











Click it and Unblock the Notifications