ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ; ಯೆಲ್ಲೂ ಅಲರ್ಟ್

|
Google Oneindia Kannada News

ಬೆಂಗಳೂರು, ಜುಲೈ 23 : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಒಟ್ಟು 11 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

Recommended Video

India vs China : ಪಾಕಿಸ್ತಾನವನ್ನು ಬಿಟ್ಟು ಚೀನಾವನ್ನು ಟಾರ್ಗೆಟ್ ಮಾಡಿದ ಭಾರತ | Oneindia Kannada

ಭಾರತೀಯ ಹವಾಮಾನ ಇಲಾಖೆ ರಾಜ್ಯದ 11 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಬೆಂಗಳೂರು ನಗರದಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 23ರಂದು ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ ಜುಲೈ 23ರಂದು ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ

ಶುಕ್ರವಾರ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

 ಕೊಡಗಿನಲ್ಲೀಗ ಮಳೆ; ಎಲ್ಲೆಲ್ಲೂ ಭತ್ತ ನಾಟಿಯ ಸುಂದರ ದೃಶ್ಯ ಕೊಡಗಿನಲ್ಲೀಗ ಮಳೆ; ಎಲ್ಲೆಲ್ಲೂ ಭತ್ತ ನಾಟಿಯ ಸುಂದರ ದೃಶ್ಯ

Heavy Rain IMD Issues Yellow Alert In 11 Districts

ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 2.9 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

 ಯಾದಗಿರಿಯಲ್ಲಿ ಧಾರಾಕಾರ ಮಳೆ; ಗೋಡೆ ಕುಸಿದು ಮಹಿಳೆ ಸಾವು ಯಾದಗಿರಿಯಲ್ಲಿ ಧಾರಾಕಾರ ಮಳೆ; ಗೋಡೆ ಕುಸಿದು ಮಹಿಳೆ ಸಾವು

ಗುರುವಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆ ನಿರೀಕ್ಷೆ ಇದೆ. ಬುಧವಾರ ಮಂಡ್ಯದ ಬಸರಾಳು ಗ್ರಾಮದಲ್ಲಿ ಗರಿಷ್ಟ 2 ಸೆಂ. ಮೀ. ಮಳೆಯಾಗಿದೆ. ಕೊಲ್ಲೂರು, ವಿಜಯಪುರ, ಅಜ್ಜಂಪುರ, ಹಿರಿಯೂರು ಮತ್ತು ಶಿರಾದಲ್ಲಿ 1 ಸೆಂ. ಮೀ. ಮಳೆಯಾಗಿದೆ.

English summary
Indian Meteorological Department (IMD) has issued a yellow alert for 11 districts of the Karnataka on July 24, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X