ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಬ್ಬಿ ಸಮುದ್ರಕ್ಕೆ ಗಜ ಲಗ್ಗೆ: ಕರ್ನಾಟಕದಲ್ಲಿ 2 ದಿನ ಭಾರಿ ಮಳೆ ಸಾಧ್ಯತೆ

|
Google Oneindia Kannada News

Recommended Video

ಇಂದಿನಿಂದ 2 ದಿನಗಳು ಕರ್ನಾಟಕದಲ್ಲಿ ಬಾರಿ ಮಳೆ | Oneindia Kannada

ಬೆಂಗಳೂರು, ನವೆಂಬರ್ 19: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಗಜ ಚಂಡ ಮಾರುತ ತಮಿಳುನಾಡಿನಲ್ಲಿ 45ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಈಗ ಅರಬ್ಬಿ ಸಮುದ್ರದ ಆಗ್ನೇಯ ಭಾಗಕ್ಕೆ ಹೋಗಿದ್ದು, ಒತ್ತಡದ ವಾತಾವರಣೆ ನಿರ್ಮಾಣವಾಗಿದೆ.

ನವೆಂಬರ್ 20 ಹಾಗೂ 21ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಉತ್ತರ ಒಳನಾಡು ಸೇರಿದಂತೆ ಪಶ್ಚಿಮ ಭಾಗದಲ್ಲಿ ಗಾಳಿಮಳೆಯಾಗಿದೆ.

ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಅಲ್ಲಲ್ಲಿ ಮಳೆಯಾಗುತ್ತಿದ್ದು, ಆ ಭಾಗದ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ವಾಯುಭಾರ ಕುಸಿತ

ವಾಯುಭಾರ ಕುಸಿತ

ಈ ನಡುವೆ ಬಂಗಾಳಕೊಲ್ಲಿ ಹಾಗೂ ಹಿಂದೂ ಮಹಾಸಾಗರ ಒಂದಾಗುವ ಜಾಗದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ಇದರಿಂದಾಗಿ ನವೆಂಬರ್ 22ರವರೆಗೂ ಮಳೆಯಾಗುವ ಸಾಧ್ಯತೆ ಇದೆ.

ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ

ಎಲ್ಲೆಲ್ಲಿ ಎಷ್ಟು ಮಳೆ

ಎಲ್ಲೆಲ್ಲಿ ಎಷ್ಟು ಮಳೆ

ತುಮಕೂರಿನ ನೇರಳೆಗುಡ್ಡದಲ್ಲಿ 32 ಮಿ.ಮೀ ಮಳೆಯಾಗಿದೆ. ಕಲಬುರಗಿ ಗಡಿ ಲಿಂಗನಹಳ್ಳಿಯಲ್ಲಿ 26 ಮಿ.ಮೀ, ಚಿತ್ರದುರ್ಗದಲ್ಲಿ 21ಮಿ.ಮೀ ಮಳೆಯಾಗಿದೆ.

'ತಿತ್ಲಿ'ಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ನಾಯ್ಡು: ಬಿಜೆಪಿ 'ತಿತ್ಲಿ'ಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ನಾಯ್ಡು: ಬಿಜೆಪಿ

ಶಿವಮೊಗ್ಗದಲ್ಲಿ 300 ಕುರಿ ಸಾವು

ಶಿವಮೊಗ್ಗದಲ್ಲಿ 300 ಕುರಿ ಸಾವು

ಸೊರಬ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು 300ಕ್ಕೂ ಹೆಚ್ಚು ಕುರಿಗಳು ಭಾನುವಾರ ಮೃತಪಟ್ಟಿವೆ. ಮೃತಪಟ್ಟ ಉರಿಗಳು ಚಿಕ್ಕೋಡಿ ತಾಲೂಕಿನ ಕಡತ್ ಲಾತ್ ಗ್ರಾಮದ ಕಲ್ಲಪ್ಪ ಎಂಬುವವರಿಗೆ ಸೇರಿದವು ಎಂದು ತಿಳಿದುಬಂದಿದೆ.

ಸಿಡಿಲು ಬಡಿದು ಮಹಿಳೆ ಸಾವು

ಸಿಡಿಲು ಬಡಿದು ಮಹಿಳೆ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಲಕ್ಷ್ಮವ್ವ ಹೇಮ್ಲಪ್ಪ ಲಮಾಣಿ ಮೃತ ಮಹಿಳೆ.

English summary
Heavy rain in Karnataka for next Two days, Oscattered to widespread light to moderate rains with isolated heavy rains likely at many places over the state and during 20th-22nd Nov, scattered to widespread light to moderate rains with isolated heavy rains likely over south interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X