ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 11ರ ತನಕ ಕರ್ನಾಟಕದಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 09 : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಸೆಪ್ಟೆಂಬರ್ 11ರ ತನಕ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ನೋಡೋ ಕಾಲ ಬಂದಾಯ್ತು | Oneindia Kannada

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಮಳೆ ಮುನ್ಸೂಚನೆ, ಜಲಾಶಯಗಳ ನೀರಿನ ಪ್ರಮಾಣ ರಾಜ್ಯದ ಮಳೆ ಮುನ್ಸೂಚನೆ, ಜಲಾಶಯಗಳ ನೀರಿನ ಪ್ರಮಾಣ

ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ 9 ಗಂಟೆ ತನಕ ಬಂದಿದೆ. ಬುಧವಾರ ಸಹ ನಗರದಲ್ಲಿ ಮಳೆಯಾಗಲಿದೆ.

ಈ ತಿಂಗಳು ಮಳೆ ಹೇಗಿರಲಿದೆ?: ಹವಾಮಾನ ಇಲಾಖೆ ಮಾಹಿತಿಈ ತಿಂಗಳು ಮಳೆ ಹೇಗಿರಲಿದೆ?: ಹವಾಮಾನ ಇಲಾಖೆ ಮಾಹಿತಿ

Heavy Rain In Karnataka

ದಾವಣಗೆರೆ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರದಲ್ಲಿಯೂ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕೊಡಗಿನ ವಿವಿಧ ತಾಲೂಕುಗಳಲ್ಲಿ ಸುರಿದ ಮಳೆ ಲೆಕ್ಕಾಚಾರ! ಕೊಡಗಿನ ವಿವಿಧ ತಾಲೂಕುಗಳಲ್ಲಿ ಸುರಿದ ಮಳೆ ಲೆಕ್ಕಾಚಾರ!

ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಚಖಂಡಿ ಕೆ. ಡಿ. ಗ್ರಾಮದ ಬಾಲಕ ದರ್ಶನ್ ಫಕೀರಪ್ಪ ಮಾದರ (14) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಹೊಲದಲ್ಲಿ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದೆ.

ಕಲಬುರಗಿ ನಗರ ಮತ್ತು ಜಿಲ್ಲೆಯ ಚಿಂಚೋಳಿ, ಕಾಳಗಿ, ಯಡ್ರಾಮಿಯಲ್ಲಿ ಮಂಗಳವಾರ ಮಳೆಯಾಗಿದೆ. ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಬಳಿಯ ನೆಲಗಂಗಿ ಜಲಪಾತ ಉಕ್ಕಿ ಹರಿಯುತ್ತಿದೆ.

English summary
The India Meteorological Department (IMD) has issued heavy rain alert in various districts of Karnataka till September 11, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X