ಮಲೆನಾಡಿನಲ್ಲಿ ಈಗ ಮಳೆಯೋಗ, ಧುಮ್ಮಿಕ್ಕುತ್ತಿದೆ ಜೋಗ
ಬೆಂಗಳೂರು, ಜುಲೈ 21 : ಕಳೆದ ಮೂರು ದಿನಗಳಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಸೇತುವೆಗಳು ಮುಳುಗಡೆಯಾಗಿವೆ, ರೈತರಿಗೆ ಮತ್ತು ಜನತೆಗೆ ಸಂತಸವನ್ನು ತಂದಿದೆ.
ಶಿವಮೊಗ್ಗದಲ್ಲಿ ಅತೀಹೆಚ್ಚಿನ ಮಳೆಯಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮುಕುತ್ತಿದ್ದು, ನೋಡುಗರಿಗೆ ರಸದೌತಣ ಬಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಗರಿಷ್ಠ 21 ಸೆಂ.ಮೀ. ಮತ್ತು ಲಿಂಗನಮಕ್ಕಿಯಲ್ಲಿ 12 ಸೆಂ.ಮೀ. ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಸಿದ್ದಾಪುರ, ಮಂಚಿಕೇರಿಯಲ್ಲಿ 10 ಸೆಂ.ಮೀ.ನಷ್ಟು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ., ಬೆಳಗಾವಿಯ ಜಿಲ್ಲೆಯ ಲೋಂಡ್ ಅರಣ್ಯ ಪ್ರದೇಶದಲ್ಲಿ, ಶಿವಮೊಗ್ಗ ಜಿಲ್ಲೆಯ ಮಳೆಪ್ರದೇಶ ಆಗುಂಬೆಯಲ್ಲಿ 7 ಸೆಂ.ಮೀ. ಮಳೆ ಸುರಿದಿದೆ.
ಮಳೆ ತಂದಿರುವ ಸಂತಸದ ನಡುವೆ ಚಿಕ್ಕಮಗಳೂರಿನಲ್ಲಿ ಮರ ಬಿದ್ದು 33 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಬೆಳಗಾವಿಯಲ್ಲಿ ಮನೆಯ ಗೋಡೆ ಕುಸಿದು ಓರ್ವರು ಅಸುನೀಗಿದ್ದಾರೆ. ಹಲವಾರು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ, ರಸ್ತೆ ಕುಸಿದು ಸಂಚಾರ ಕಟ್ ಆಗಿದೆ, ಮರಗಳೂ ಧರೆಗುರುಳಿವೆ.
ಕೊಡಗಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಹಾರಂಗಿ ಜಲಾಶಯ ಹೆಚ್ಚುಕಡಿಮೆ ತುಂಬುವ ಹಂತಕ್ಕೆ ಬಂದಿದೆ. ಪ್ರಸ್ತುತ ಹಾರಂಗಿ ಜಲಾಶಯದ ಮಟ್ಟ 2852.89 ಅಡಿಗಳಷ್ಟಿದೆ. ಇದರ ಗರಿಷ್ಠ ಮಟ್ಟ 2859 ಅಡಿಗಳು. ಮಂಡ್ಯದ ಕೃಷ್ಣರಾಜ ಸಾಗರ ಅಣೆಕಟ್ಟೆಗೂ ನೀರಿನ ಹರಿವು ಹೆಚ್ಚಾಗಿದ್ದು 81.20 (ಗರಿಷ್ಠ 124.80) ಅಡಿಗೆ ಮುಟ್ಟಿದೆ.
ಕರ್ನಾಟಕ ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯುದ್ದಕ್ಕೂ ಭಾರೀ ಮಳೆ ಸುರಿಯಲಿದೆ. ಆದರೆ, ಬೆಂಗಳೂರು ಸುತ್ತಮುತ್ತಲು ಮೋಡ ಕವಿದ ವಾತಾವರಣವಿದ್ದರೂ ಯಾವುದೇ ಮಳೆಯ ಲಕ್ಷಣಗಳಿಲ್ಲದಿರುವುದು ಚಿಂತೆಯ ವಿಷಯವಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications