ಮಲೆನಾಡಿನಲ್ಲಿ ಈಗ ಮಳೆಯೋಗ, ಧುಮ್ಮಿಕ್ಕುತ್ತಿದೆ ಜೋಗ
ಬೆಂಗಳೂರು, ಜುಲೈ 21 : ಕಳೆದ ಮೂರು ದಿನಗಳಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಸೇತುವೆಗಳು ಮುಳುಗಡೆಯಾಗಿವೆ, ರೈತರಿಗೆ ಮತ್ತು ಜನತೆಗೆ ಸಂತಸವನ್ನು ತಂದಿದೆ.
ಶಿವಮೊಗ್ಗದಲ್ಲಿ ಅತೀಹೆಚ್ಚಿನ ಮಳೆಯಾಗಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮುಕುತ್ತಿದ್ದು, ನೋಡುಗರಿಗೆ ರಸದೌತಣ ಬಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಗರಿಷ್ಠ 21 ಸೆಂ.ಮೀ. ಮತ್ತು ಲಿಂಗನಮಕ್ಕಿಯಲ್ಲಿ 12 ಸೆಂ.ಮೀ. ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಸಿದ್ದಾಪುರ, ಮಂಚಿಕೇರಿಯಲ್ಲಿ 10 ಸೆಂ.ಮೀ.ನಷ್ಟು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ., ಬೆಳಗಾವಿಯ ಜಿಲ್ಲೆಯ ಲೋಂಡ್ ಅರಣ್ಯ ಪ್ರದೇಶದಲ್ಲಿ, ಶಿವಮೊಗ್ಗ ಜಿಲ್ಲೆಯ ಮಳೆಪ್ರದೇಶ ಆಗುಂಬೆಯಲ್ಲಿ 7 ಸೆಂ.ಮೀ. ಮಳೆ ಸುರಿದಿದೆ.
ಮಳೆ ತಂದಿರುವ ಸಂತಸದ ನಡುವೆ ಚಿಕ್ಕಮಗಳೂರಿನಲ್ಲಿ ಮರ ಬಿದ್ದು 33 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಬೆಳಗಾವಿಯಲ್ಲಿ ಮನೆಯ ಗೋಡೆ ಕುಸಿದು ಓರ್ವರು ಅಸುನೀಗಿದ್ದಾರೆ. ಹಲವಾರು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ, ರಸ್ತೆ ಕುಸಿದು ಸಂಚಾರ ಕಟ್ ಆಗಿದೆ, ಮರಗಳೂ ಧರೆಗುರುಳಿವೆ.
ಕೊಡಗಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಹಾರಂಗಿ ಜಲಾಶಯ ಹೆಚ್ಚುಕಡಿಮೆ ತುಂಬುವ ಹಂತಕ್ಕೆ ಬಂದಿದೆ. ಪ್ರಸ್ತುತ ಹಾರಂಗಿ ಜಲಾಶಯದ ಮಟ್ಟ 2852.89 ಅಡಿಗಳಷ್ಟಿದೆ. ಇದರ ಗರಿಷ್ಠ ಮಟ್ಟ 2859 ಅಡಿಗಳು. ಮಂಡ್ಯದ ಕೃಷ್ಣರಾಜ ಸಾಗರ ಅಣೆಕಟ್ಟೆಗೂ ನೀರಿನ ಹರಿವು ಹೆಚ್ಚಾಗಿದ್ದು 81.20 (ಗರಿಷ್ಠ 124.80) ಅಡಿಗೆ ಮುಟ್ಟಿದೆ.
ಕರ್ನಾಟಕ ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯುದ್ದಕ್ಕೂ ಭಾರೀ ಮಳೆ ಸುರಿಯಲಿದೆ. ಆದರೆ, ಬೆಂಗಳೂರು ಸುತ್ತಮುತ್ತಲು ಮೋಡ ಕವಿದ ವಾತಾವರಣವಿದ್ದರೂ ಯಾವುದೇ ಮಳೆಯ ಲಕ್ಷಣಗಳಿಲ್ಲದಿರುವುದು ಚಿಂತೆಯ ವಿಷಯವಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications